Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕಲ ಚೇತನರು ದೇವರ ಮಕ್ಕಳು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು : ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ವಿಕಲ ಚೇತನರು ಅಂದರೆ ದೇವರ ಮಕ್ಕಳಿದ್ದಂತೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕಂಠೀರವ ಒಳಾಂಗಣ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯಲ್ಲಿ ಮಾತನಾಡಿದ ಅವರು ವಿಶೇಷ ಚೇತನರಿಗೆ ಮನೋಬಲವೇ ಶಕ್ತಿ ಎಂದರು.


ಕಳೆದ ಬಾರಿ ಸಾಮಾನ್ಯ ಒಲಿಂಪಿಕ್ಸ್‌ಗಿಂತಲೂ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ವಿಶೇಷ ಚೇತನರು ೨೧ ಪದಕಗಳನ್ನು ಭಾರತಕ್ಕೆ ಗೆದ್ದುಕೊಟ್ಟರು. ಅಂಗ ವೈಕಲ್ಯವನ್ನು ಮೆಟ್ಟಿ ನಿಂತು ವಿಕಲ ಚೇತನರು ಉತ್ತಮ ಸಾಧನೆ ಮಾಡಿರುವ ಉದಾಹರಣೆಗಳು ನಮ್ಮ ಮುಂದಿವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.


ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಥ್ಯದ ನಮ್ಮ ಸರ್ಕಾರ ವಿಶೇಷ ಚೇತನರ ಕಾರ್ಯಕ್ರಮಗಳನ್ನು ಮುಟ್ಟಿಸುತ್ತೇವೆ. ಭಗವಂತನ ಸೃಷ್ಟಿ ನಿಮಗೆ ಸಾಧನೆ ಮಾಡಲು ಪ್ರೇರಣೆಯಾಗಿದೆ. ವಿಘ್ನಗಳನ್ನು ನಿವಾರಿಸುವ ಗಣಪತಿಯೇ ವಿಕಲಚೇತನರಿಗೆ ಸ್ಫೂರ್ತಿ. ಹಾಗಾಗಿ ಅವರಲ್ಲಿ ಆತ್ಮಬಲ ಹೆಚ್ಚಿದೆ. ವಿಕಲಚೇತನರ ಸಾಧನೆ ಇತಿಹಾಸದ ಪುಟಗಳಲ್ಲಿದ್ದು, ಅವರ ಅಭಿವೃದ್ಧಿಗೆ ಹಾಗೂ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.


* *ಲಕ್ಷ್ಮೀ ಹೆಬ್ಬಾಳಕರ್‌ ಕ್ರಿಯಾಶೀಲ ಸಚಿವೆ*


ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ತುಂಬಾ ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿಶೇಷ ಚೇತನರಿಗೆ ಇಲಾಖೆಯಲ್ಲಿರುವ ಸವಲತ್ತುಗಳನ್ನು ಸೂಕ್ತ ರೀತಿಯಲ್ಲಿ ತಲುಪಿಸುತ್ತಿದ್ದಾರೆ. ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ, ಸುಧಾರಣೆ ತರಲು ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರ ಕಾರ್ಯವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶ್ಲಾಘಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ