LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಸಮಾನತೆ, ಮಾನವೀಯತೆಯ ಸಂದೇಶ ಇಂದಿಗೂ ಪ್ರಸ್ತುತ: ಕೆ.ಇ. ಚಿದಾನಂದಪ್ಪ



ಬಳ್ಳಾರಿ,ಜು.31 ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಜಾತಿ, ಲಿಂಗ ಹಾಗೂ ಅಸ್ಪೃಶ್ಯತೆ ವಿರುದ್ಧ ಸಾಮಾಜಿಕ ಜಾಗೃತಿ ಮೂಡಿಸಿ ಸಮಾನತೆ ಮತ್ತು ಮಾನವೀಯತೆಯ ಸಂದೇಶ ಸಾರಿದ ಮಹಾನ್ ಶರಣರಾಗಿದ್ದಾರೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಹೇಳಿದರು.
 ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 ಬಸವಣ್ಣನವರ ಆಪ್ತ ಸಹಚರರಾಗಿದ್ದ ಹಡಪದ ಅಪ್ಪಣ್ಣ ಅವರು ಸಮಾಜದಲ್ಲಿದ್ದ ಜಾತಿ ಮತ್ತು ಲಿಂಗ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ ಶ್ರೇಷ್ಠ ಶರಣರಾಗಿದ್ದರು. "ಅಪ್ಪಣ್ಣ ಪ್ರಿಯ ಚನ್ನಬಸವಣ್ಣ" ಅಂಕಿತನಾಮದಲ್ಲಿ 300ಕ್ಕೂ ಅಧಿಕ ವಚನಗಳನ್ನು ರಚಿಸಿ ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ಜನರಿಗೆ ತಲುಪಿಸಿದರು ಎಂದು ಹೇಳಿದರು.
 ಮೂಢನಂಬಿಕೆಗಳನ್ನು ತೊಡೆದುಹಾಕುವ ನಿಟ್ಟಿನಲ್ಲಿ ಬಸವಣ್ಣನವರು ಅನುಭವ ಮಂಟಪಕ್ಕೆ ಬರುವವರಿಗೆ ಹಡಪದ ಅಪ್ಪಣ್ಣರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆಯುವಂತೆ ಸೂಚಿಸುತ್ತಿದ್ದರು. ಅವರ ಪತ್ನಿ ಲಿಂಗಮ್ಮ ಕೂಡ ವಚನಗಾರ್ತಿಯಾಗಿದ್ದು, ಸಮಾಜ ಸುಧಾರಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದರು.
 ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಬಳ್ಳಾರಿಯ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಭಾಷ ಮಾತನಾಡಿ, ಹಡಪದ ಅಪ್ಪಣ್ಣ ಅವರು ಬಸವಣ್ಣನವರ ಬಾಲ್ಯದ ಗೆಳೆಯರಾಗಿದ್ದು, ವಿಶ್ವದ ಮೊದಲ ಪ್ರಜಾಪ್ರಭುತ್ವ ಸಂಸತ್ತೆAದು ಖ್ಯಾತಿ ಪಡೆದ ಅನುಭವ ಮಂಟಪದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು ಎಂದು ಹೇಳಿದರು.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಜನಿಸಿದ ಹಡಪದ ಅಪ್ಪಣ್ಣ ಅವರ ವಚನಗಳಲ್ಲಿ ಕಾಯಕ, ದಾಸೋಹ, ಭಕ್ತಿ, ವೈರಾಗ್ಯ, ಷಟಸ್ಥಲ ಹಾಗೂ ಸಾಮಾಜಿಕ ಸಮಾನತೆಯ ಮೌಲ್ಯಗಳು ಪ್ರತಿಫಲಿಸುತ್ತವೆ ಎಂದು ವಿವರಿಸಿದರು.
 ಹಡಪದ ಅಪ್ಪಣ್ಣ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಹೆಚ್. ರುದ್ರಪ್ಪ ಮಾತನಾಡಿ, ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರ ಜಾಗ ಹಾಗೂ ವಿಶೇಷ ಅನುದಾನ ಒದಗಿಸಬೇಕು. ಸಮುದಾಯದವರಿಗೆ ಜಾತಿ ಪ್ರಮಾಣಪತ್ರ ವಿತರಣೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
 ಕಾರ್ಯಕ್ರಮಕ್ಕೆ ಶ್ರೀ ಮಳೆ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಇದೇ ಸಂದರ್ಭದಲ್ಲಿ ಸಿರುಗುಪ್ಪ ತಾಲೂಕಿನ ಎಸ್.ಆರ್.ಎಂ. ಶರಣ ಬಸವ ಅವರ ತಂಡದಿAದ ವಚನ ಸಂಗೀತ ಕಾರ್ಯಕ್ರಮ ನಡೆಯಿತು.
ಸಂಭ್ರಮದ ಮೆರವಣಿಗೆ
 ಜಯಂತಿ ಅಂಗವಾಗಿ ನಗರದ ಮುನ್ಸಿಪಲ್ ಕಾಲೇಜು ಆವರಣದಿಂದ ಆರಂಭವಾದ ಮೆರವಣಿಗೆ ಇಂದಿರಾ ವೃತ್ತ, ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‌ಪೇಟೆ, ತೇರುಬೀದಿ, ಜೈನ್ ಮಾರ್ಕೆಟ್ ಹಾಗೂ ಹೆಚ್.ಆರ್. ಗವಿಯಪ್ಪ ವೃತ್ತ ಮಾರ್ಗವಾಗಿ ಡಾ. ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ಸಂಭ್ರಮದಿAದ ಸಾಗಿತು. ವಿವಿಧ ಜಾನಪದ ಹಾಗೂ ಸಾಂಸ್ಕೃತಿಕ ಕಲಾತಂಡಗಳ ಪ್ರದರ್ಶನ ಮೆರವಣಿಗೆಗೆ ವಿಶೇಷ ಮೆರುಗು ನೀಡಿತು.
 ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ರಾಜ್ಯ ಸಂಘಟನಾ ಕಾರ್ಯದರ್ಶಿ ಶಶಿಕುಮಾರ, ಕರ್ನಾಟಕ ಬೈಲಾಟ ಅಕಾಡೆಮಿಯ ಮಾಜಿ ಸದಸ್ಯ ತಿಪೇಸ್ವಾಮಿ, ಹಡಪದ ಅಪ್ಪಣ್ಣ ಸೇವಾ ಸಮಿತಿಯ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್