LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮೋದಿ ಇರುವ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಉಗ್ರರು ಬೆದರಿಕೆ

ಪ್ರಧಾನಿ ಮೋದಿ ಇರುವ ವಿಮಾನದ ಮೇಲೆ ದಾಳಿ ನಡೆಸುವುದಾಗಿ ಉಗ್ರರು ಬೆದರಿಕೆ ಹಾಕಿದ್ದಾರೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಮೋದಿ ಫ್ರಾನ್ಸ್, ಅಮೆರಿಕ ಪ್ರವಾಸಕ್ಕೆ ತೆರಳುವ ಮುನ್ನ ಈ ಬೆದರಿಕೆ ಬಂದಿತ್ತು. ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂಬ ಎಚ್ಚರಿಕೆಯ ಕರೆ ಮುಂಬೈ ಪೊಲೀಸರಿಗೆ ಬಂದಿತ್ತು.

ಫೆಬ್ರವರಿ 11 ರಂದು ಮುಂಬೈ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿದ್ದು, ಪ್ರಧಾನಿ ಮೋದಿ ವಿದೇಶಕ್ಕೆ ಅಧಿಕೃತ ಭೇಟಿಗೆ ತೆರಳುತ್ತಿರುವಾಗ ಅವರ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ಮಾಡಬಹುದು ಎಂದು ಎಚ್ಚರಿಸಲಾಗಿದೆ. ಮಾಹಿತಿಯ ಗಂಭೀರ ಸ್ವರೂಪವನ್ನು ಪರಿಗಣಿಸಿ, ಪೊಲೀಸರು ಇತರ ಸಂಸ್ಥೆಗಳಿಗೆ ಮಾಹಿತಿ ನೀಡಿ ತನಿಖೆ ಆರಂಭಿಸಿದ್ದರು ಎಂದು ಎಎನ್​ಐ ವರದಿ ಮಾಡಿದೆ.

ಪ್ರಧಾನಿ ಮೋದಿ ಅವರ ವಿಮಾನದ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಬಂದ ನಂತರ, ಭದ್ರತಾ ಪಡೆಗಳ ತಂಡಗಳು ಈ ವಿಷಯದ ಬಗ್ಗೆ ತನಿಖೆ ನಡೆಸಲು ಪ್ರಾರಂಭಿಸಿದವು. ಕರೆ ಮಾಡುತ್ತಿರುವ ವ್ಯಕ್ತಿ ಯಾರೆಂದು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ.

ಪ್ರಧಾನಿ ಮೋದಿ ಫ್ರಾನ್ಸ್ ಮತ್ತು ಅಮೆರಿಕ ಪ್ರವಾಸದಲ್ಲಿದ್ದಾರೆ. ಫೆಬ್ರವರಿ 12 ರಿಂದ 14 ರವರೆಗೆ ಪ್ರಧಾನಿ ಮೋದಿ ಫ್ರಾನ್ಸ್‌ನಲ್ಲಿ ನೆಲೆಸಿರುವ ಮೋದಿ ಇಂದು ಅಮೆರಿಕಕ್ಕೆ ತೆರಳಲಿದ್ದಾರೆ. ಈ ಸಮಯದಲ್ಲಿ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ