ಉರಿ, ಆಗಸ್ಟ್ 13: ಆಪರೇಷನ್ ಸಿಂಧೂರ್ ಬಳಿಕ ಗಡಿಯಲ್ಲಿ ಮೊದಲ ಬಾರಿಗೆ ಉಗ್ರರು ಒಳನುಸುಳಲು ಯತ್ನಿಸಿರುವ ಘಟನೆ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದಲ್ಲಿ ನಡೆದಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಇದಾದ ಬಳಿಕ ಗುಂಡಿನ ಚಕಮಕಿ ನಡೆಯಿತು, ಘಟನೆಯಲ್ಲಿ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ.ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಸೇನೆಯ ಮೂಲಗಳ ಪ್ರಕಾರ, ಆಗಸ್ಟ್ 12 ರ ತಡರಾತ್ರಿ ಹಲವರು ಭಾರತದ ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದರು.26 ಅಮಾಯಕರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ನಂತರದ ಅಹಿತಕರ ಶಾಂತತೆಯ ನಂತರ ಪಾಕಿಸ್ತಾನದಿಂದ ಇದು ಮೊದಲ ಪ್ರಮುಖ ಪ್ರಚೋದನೆಯಾಗಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಡೆಸಿದ ವಾಯುದಾಳಿಗಳು ಮತ್ತು ಭಾರತದ ಪಶ್ಚಿಮ ಗಡಿಯಲ್ಲಿ ಪಾಕಿಸ್ತಾನದ ಡ್ರೋನ್ ದಾಳಿಗಳ ನಂತರ, ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.