Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಏಡ್ಸ್ ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು.

ಸೋಮವಾರ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ರಾಜ್ಯದಲ್ಲಿ 13,183 ಪ್ರಕರಣಗಳು ವರದಿಯಾಗಿದ್ದು, ಈ ಸಾಲಿನಲ್ಲಿ ಅಕ್ಟೋಬರ್ ವರೆಗೆ 7,720 ಪ್ರಕರಣಗಳು ಪತ್ತೆಯಾಗಿವೆ.

ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು, ಈ ವರ್ಷ ಅಕ್ಟೋಬರ್ ವರೆಗೆ 247 ಸೋಂಕು ವರದಿಯಾಗಿವೆ. ಗರ್ಭಿಣಿಯರಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ.0.03ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸುವ ಗುರಿಯೊಂದಿಗೆ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದರು.

ಟ್ರಕ್ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಮಾದಕವಸ್ತುಗಳನ್ನು ಸ್ವೀಕರಿಸುವವರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುತ್ತದೆ. ಸುರಕ್ಷಿತ ಲೈಂಗಿಕ ಕ್ರಿಯೆಯೇ ಮಾರಣಾಂತಿಕ ಕಾಯಿಲೆಯಿಂದ ಪಾರಾಗಲು ದಾರಿ. ಲೈಂಗಿಕ ಕಾರ್ಯಕರ್ತೆಯರನ್ನು ಸಮಾಜದ ಮುಖ್ಯ ವಾಹಿನಿಯಿಂದ ಹೊರಗೆ ಇಟ್ಟಿರುವ ಕಾರಣ ಗಂಡಾಂತರಗಳು ಉಂಟಾಗುತ್ತಿವೆ. ಆದರೆ, ಅವರನ್ನು ಮಾನವೀಯತ ದೃಷ್ಟಿಯಿಂದ ನೋಡದಿದ್ದರೆ ಏಡ್ಸ್ ನಿಯಂತ್ರಣ ಅಸಾಧ್ಯ ಎಂದು ತಿಳಿಸಿದರು.

ರಾಜ್ಯದಲ್ಲಿ 433 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2592 ಸೌಲಭ್ಯಾಧಾರಿತ ಸಮಗ್ರ ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. ಅಲ್ಲಿ ನೀಡುತ್ತಿರುವ ಚಿಕಿತ್ಸೆ, ಥೆರಪಿಗಳಿಂದಾಗಿ ಇಳಿಕೆಯಾಗಿದೆ. ಇಷ್ಟಕ್ಕೆ ಸುಮ್ಮನಾಗದೇ ಎಚ್‌ಐವಿ/ಏಡ್ಸ್‌ ಪತ್ತೆಯೇ ಇಲ್ಲ ಎಂದು ಆಗುವವರೆಗೆ ಕೆಲಸ ಮಾಡಬೇಕು ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ