Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಮನವಿ ಸ್ವೀಕರಿಸದ ಸಚಿವ ಗುಂಡೂರಾವ್‌ ಕಾರಿಗೆ ಮುತ್ತಿಗೆ


 ಹುಕ್ಕೇರಿ :9 ನಗರದಲ್ಲಿ ಇವತ್ತು ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಇವರು ತಾಲೂಕಿನ ಸಂಕೇಶ್ವರ, ಅಮ್ಮಣಗಿ, ಹುಕ್ಕೇರಿ ನಗರಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ವಿವಿಧ ಸರಕಾರಿ  ಕಾಮಗಾರಿಗಳಿಗೆ ಉದ್ಘಾಟನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಹುಕ್ಕೇರಿ ನಗರದ ತಾಲೂಕು ಆಸ್ಪತ್ರೆಯ ಅವ್ಯವಸ್ಥೆ ಕುರಿತು ಮಾನ್ಯ ಸಚಿವರ ಗಮನಕ್ಕೆ ತರಲು ಮನವಿ ನೀಡಲು ಮುಂದಾದಾಗ ಸಚಿವರು ತಮ್ಮ ಉದ್ಧಟತನವನ್ನು ಮೆರೆದು ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ಆಲಿಸದೆ ಅವರ ಮನವಿಯನ್ನು ಸ್ವೀಕರಿಸದೆ ಹೋಗಿರುವುದು ರೈತರ ಕೆಂಗಣ್ಣಿಗೆ ಕಾರಣವಾಗಿದೆ. ಸಂದರ್ಭದಲ್ಲಿ ರೈತರು ಸಚಿವರ್ ಕಾರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು  ಈ ಕುರಿತು ಮಾತನಾಡಿದ ಸಂಘಟನೆಯ ತಾಲೂಕ ಅಧ್ಯಕ್ಷರ ಸಂಜು ಹಾವನ್ನವರ ರೈತ ವಿರೋಧಿ ಆರ್ ಗುಂಡುರಾವ್ ಅವರು ಅವರ ಅವಧಿಯಲ್ಲಿ ನಿಪ್ಪಾಣಿಯ ರೈತರ ತಂಬಾಕು ಆಂದೋಲನದಲ್ಲಿ ಗೋಲಿಬಾರ್ ಮಾಡಿಸುವ ಮೂಲಕ ಅವರ ರೈತ ವಿರೋಧಿಯನ್ನು ತೋರಿದ್ದರು  ಇವತ್ತು ದಿನೇಶ್ ಗುಂಡೂರಾವ್ ಅವರು ರೈತರ ಸಮಸ್ಯೆಯ ಮನವಿಯನ್ನು ಸ್ವೀಕರಿಸದೆ ತಮ್ಮ ರೈತ ವಿರೋಧಿ ನೀತಿಯನ್ನು ತೋರಿದ್ದಾರೆ ಎಂದು 30 40 ವರ್ಷಗಳ ಹಿಂದಿನ ಕಹಿ ಘಟನೆಯನ್ನು ಮತ್ತೊಮ್ಮೆ ಸ್ಮರಿಸಿದರು  ರೈತರ ಕಷ್ಟಗಳಿಗೆ ಸ್ಪಂದಿಸದ ಸಚಿವರ ರೈತ ವಿರೋಧಿ ನೀತಿಗೆ ಧಿಕ್ಕಾರ ತಿಳಿಸಿ ತಮ್ಮ ಆಕ್ರೋಶ ಹೊರ ಹಾಕಿದರು ಅಲ್ಲದೆ ಇದು ರೈತರಿಗೆ ಮಾಡುತ್ತಿರುವ ದೊಡ್ಡ ಅನ್ಯಾಯ ಸರ್ಕಾರದ ರೈತ ವಿರೋಧಿ ನೀತಿ ಬಗ್ಗೆ ಇನ್ನು ಮುಂದೆ ರಾಜ್ಯದ ಮೂಲೆ ಮೂಲೆಗಳಲ್ಲಿ ಹೋರಾಟ ನಡೆಸುವುದಾಗಿ ಅವರು ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕಿನ ನೂರಾರು ಜನ ರೈತರು ಉಪಸ್ಥಿತರಿದ್ದು ಬೆಂಬಲವನ್ನು ಸೂಚಿಸಿದರು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*