Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಳಿಂಗ ಸರ್ಪ ಸಂರಕ್ಷಣೆಗೆ ಸಚಿವ ಖಂಡ್ರೆ ಸೂಚನೆ

ಚಿಕ್ಕಮಗಳೂರು, ನವೆಂಬರ್ 24: ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲು ವಿಶೇಷ ತಂಡವನ್ನು ರಚಿಸುವಂತೆ ಸೂಚನೆ ನೀಡಿದ್ದಾರೆ. ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು, ಕಾಡಿಗೆ ಬಿಡಲು ಯಾವುದೇ ಖಾಸಗಿ ಸಂಸ್ಥೆಗಳ ಮೊರೆ ಹೋಗದೆ ಅರಣ್ಯ ಇಲಾಖೆಯ ವಿಭಾಗದ 5 ಸಿಬ್ಬಂದಿಗೆ ತರಬೇತಿ ನೀಡುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.



ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ‌ಸರ್ಪಗಳು ಹೆಚ್ಚಾಗಿ ಕಂಡು ಬರುತ್ತಿವೆ. ಜನವಸತಿ ‌ಪ್ರದೇಶ ಸೇರಿದಂತೆ ಮನೆಯೊಳಗೆ, ತೋಟಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗನಿಂದ ಸಾರ್ವಜನಿಕರಲ್ಲಿ ಭಯ ಮೂಡುತ್ತಿದೆ. ಇದಕ್ಕೆ ಪರಿಹಾರವಾಗಿ ಉರಗ ತಜ್ಞರು ಮತ್ತು ಖಾಸಗಿ ಸಂಸ್ಥೆಗಳನ್ನು ಸಂಪರ್ಕಿಸುವ ಅಗತ್ಯವಿಲ್ಲವೆಂದು ಹೇಳಿರುವ ಈಶ್ವರ್ ಖಂಡ್ರೆ, ಕಾಳಿಂಗ ಸರ್ಪವನ್ನು ಹಿಡಿಯಲು ಮತ್ತು ಸುರಕ್ಷಿತವಾಗಿ ಕಾಡಿಗೆ ಬಿಡಲು ನಮ್ಮದೇ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ನೀಡಬೇಕು. ಒಬ್ಬ ಪ್ರಾದೇಶಿಕ ಅರಣ್ಯಾಧಿಕಾರಿಯೊಂದಿಗೆ ತರಬೇತಿ ಪಡೆತ 5 ಜನರ ತಂಡವನ್ನು ನೇಮಿಸಬೇಕು. ಈಗಾಗಲೆ ರಚಿಸಿರುವ ETF(Elephant task Force) ಮತ್ತು LTF (Leopard Task Force) ನಂತೆಯೇ ಕಾಳಿಂಗ ಸರ್ಪವನ್ನು ಹಿಡಿಯಲೂ ಒಂದು ತಂಡ ರಚಿಸುವುದರಿಂದ ಸರ್ಪಗಳ ಸೆರೆ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ ವನ್ನೂ ತಪ್ಪಿಸಬಹುದಾಗಿದೆ ಎಂದು ಹೇಳೀದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ