Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಳಿಂಗ ಸರ್ಪ ಸಂರಕ್ಷಣೆಗೆ ಸಚಿವ ಖಂಡ್ರೆ ಸೂಚನೆ

ಚಿಕ್ಕಮಗಳೂರು, ನವೆಂಬರ್ 24: ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲು ವಿಶೇಷ ತಂಡವನ್ನು ರಚಿಸುವಂತೆ ಸೂಚನೆ ನೀಡಿದ್ದಾರೆ. ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು, ಕಾಡಿಗೆ ಬಿಡಲು ಯಾವುದೇ ಖಾಸಗಿ ಸಂಸ್ಥೆಗಳ ಮೊರೆ ಹೋಗದೆ ಅರಣ್ಯ ಇಲಾಖೆಯ ವಿಭಾಗದ 5 ಸಿಬ್ಬಂದಿಗೆ ತರಬೇತಿ ನೀಡುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.



ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ‌ಸರ್ಪಗಳು ಹೆಚ್ಚಾಗಿ ಕಂಡು ಬರುತ್ತಿವೆ. ಜನವಸತಿ ‌ಪ್ರದೇಶ ಸೇರಿದಂತೆ ಮನೆಯೊಳಗೆ, ತೋಟಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗನಿಂದ ಸಾರ್ವಜನಿಕರಲ್ಲಿ ಭಯ ಮೂಡುತ್ತಿದೆ. ಇದಕ್ಕೆ ಪರಿಹಾರವಾಗಿ ಉರಗ ತಜ್ಞರು ಮತ್ತು ಖಾಸಗಿ ಸಂಸ್ಥೆಗಳನ್ನು ಸಂಪರ್ಕಿಸುವ ಅಗತ್ಯವಿಲ್ಲವೆಂದು ಹೇಳಿರುವ ಈಶ್ವರ್ ಖಂಡ್ರೆ, ಕಾಳಿಂಗ ಸರ್ಪವನ್ನು ಹಿಡಿಯಲು ಮತ್ತು ಸುರಕ್ಷಿತವಾಗಿ ಕಾಡಿಗೆ ಬಿಡಲು ನಮ್ಮದೇ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ನೀಡಬೇಕು. ಒಬ್ಬ ಪ್ರಾದೇಶಿಕ ಅರಣ್ಯಾಧಿಕಾರಿಯೊಂದಿಗೆ ತರಬೇತಿ ಪಡೆತ 5 ಜನರ ತಂಡವನ್ನು ನೇಮಿಸಬೇಕು. ಈಗಾಗಲೆ ರಚಿಸಿರುವ ETF(Elephant task Force) ಮತ್ತು LTF (Leopard Task Force) ನಂತೆಯೇ ಕಾಳಿಂಗ ಸರ್ಪವನ್ನು ಹಿಡಿಯಲೂ ಒಂದು ತಂಡ ರಚಿಸುವುದರಿಂದ ಸರ್ಪಗಳ ಸೆರೆ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ ವನ್ನೂ ತಪ್ಪಿಸಬಹುದಾಗಿದೆ ಎಂದು ಹೇಳೀದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ