LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕಾಳಿಂಗ ಸರ್ಪ ಸಂರಕ್ಷಣೆಗೆ ಸಚಿವ ಖಂಡ್ರೆ ಸೂಚನೆ

ಚಿಕ್ಕಮಗಳೂರು, ನವೆಂಬರ್ 24: ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲು ವಿಶೇಷ ತಂಡವನ್ನು ರಚಿಸುವಂತೆ ಸೂಚನೆ ನೀಡಿದ್ದಾರೆ. ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು, ಕಾಡಿಗೆ ಬಿಡಲು ಯಾವುದೇ ಖಾಸಗಿ ಸಂಸ್ಥೆಗಳ ಮೊರೆ ಹೋಗದೆ ಅರಣ್ಯ ಇಲಾಖೆಯ ವಿಭಾಗದ 5 ಸಿಬ್ಬಂದಿಗೆ ತರಬೇತಿ ನೀಡುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.



ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ‌ಸರ್ಪಗಳು ಹೆಚ್ಚಾಗಿ ಕಂಡು ಬರುತ್ತಿವೆ. ಜನವಸತಿ ‌ಪ್ರದೇಶ ಸೇರಿದಂತೆ ಮನೆಯೊಳಗೆ, ತೋಟಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗನಿಂದ ಸಾರ್ವಜನಿಕರಲ್ಲಿ ಭಯ ಮೂಡುತ್ತಿದೆ. ಇದಕ್ಕೆ ಪರಿಹಾರವಾಗಿ ಉರಗ ತಜ್ಞರು ಮತ್ತು ಖಾಸಗಿ ಸಂಸ್ಥೆಗಳನ್ನು ಸಂಪರ್ಕಿಸುವ ಅಗತ್ಯವಿಲ್ಲವೆಂದು ಹೇಳಿರುವ ಈಶ್ವರ್ ಖಂಡ್ರೆ, ಕಾಳಿಂಗ ಸರ್ಪವನ್ನು ಹಿಡಿಯಲು ಮತ್ತು ಸುರಕ್ಷಿತವಾಗಿ ಕಾಡಿಗೆ ಬಿಡಲು ನಮ್ಮದೇ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ನೀಡಬೇಕು. ಒಬ್ಬ ಪ್ರಾದೇಶಿಕ ಅರಣ್ಯಾಧಿಕಾರಿಯೊಂದಿಗೆ ತರಬೇತಿ ಪಡೆತ 5 ಜನರ ತಂಡವನ್ನು ನೇಮಿಸಬೇಕು. ಈಗಾಗಲೆ ರಚಿಸಿರುವ ETF(Elephant task Force) ಮತ್ತು LTF (Leopard Task Force) ನಂತೆಯೇ ಕಾಳಿಂಗ ಸರ್ಪವನ್ನು ಹಿಡಿಯಲೂ ಒಂದು ತಂಡ ರಚಿಸುವುದರಿಂದ ಸರ್ಪಗಳ ಸೆರೆ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ ವನ್ನೂ ತಪ್ಪಿಸಬಹುದಾಗಿದೆ ಎಂದು ಹೇಳೀದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್