Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ



 *ಬೆಂಗಳೂರು:* ಬಹುಭಾಷಾ ನಟಿ, ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.


ವರನಟ ರಾಜ್‌ಕುಮಾರ್ ಸೇರಿದಂತೆ ಖ್ಯಾತ ನಟರೊಂದಿಗೆ ಅಭಿಯಿಸಿದ್ದ ಸರೋಜಾದೇವಿ, ತಮ್ಮ ಮನೋಜ್ಞ ಅಭಿನಯದಿಂದ *ಅಭಿನಯ ಸರಸ್ವತಿ* ಎಂದೇ ಗುರಿತಿಸಿಕೊಂಡಿದ್ದರು. ನಾನು ಚಿಕ್ಕವಯಸ್ಸಿನಿಂದಲೂ ಸರೋಜಾದೇವಿ ಅವರ ಚಲನಚಿತ್ರಗಳನ್ನು ನೋಡಿಕೊಂಡು ಬೆಳೆದಿದ್ದೇನೆ. ಇಡೀ ದಕ್ಷಿಣ ಭಾರತದಲ್ಲೇ ಅವರು ದೊಡ್ಡ ಹೆಸರು ಮಾಡಿದ್ದರು. ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಎಲ್ಲಾ ಅಭಿಮಾನಿಗಳಿಗೆ ಹಾಗೂ ಕುಟುಂಬ ವರ್ಗದವರಿಗೆ, ಸ್ನೇಹಿತರಿಗೆ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.


ಸುಮಾರು ಆರು ದಶಕಗಳ ಕಾಲ ಕನ್ನಡ ಸೇರಿದಂತೆ ದೇಶದ ಹಲವಾರು ಭಾಷೆಗಳ ಚಿತ್ರಗಳಲ್ಲಿ ಅಭಿನೇತ್ರಿ ಬಿ. ಸರೋಜಾದೇವಿ ಅಭಿನಯಿಸಿದ್ದರು. ‌ ಕಿತ್ತೂರು ರಾಣಿ ಚೆನ್ನಮ್ಮ, ಮಲ್ಲಮ್ಮನ ಪವಾಡ, ಅಮರಶಿಲ್ಪಿ ಜಕ್ಕಣಾಚಾರಿ, ಶ್ರೀನಿವಾಸ ಕಲ್ಯಾಣ, ಬಬ್ರುವಾಹನ, ವಿಜಯನಗರದ ವೀರಪುತ್ರ ಸೇರಿದಂತೆ ಹಲವು ಪೌರಾಣಿಕ ಚಲನಚಿತ್ರಗಳಲ್ಲಿ ಮನೋಜ್ಞವಾಗಿ ನಟಿಸಿ, ಸಿನಿಪ್ರಿಯರ ಮನಸ್ಸಿನಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ.


ಪದ್ಮಭೂಷಣ ಪ್ರಶಸ್ತಿಯ ಜೊತೆಗೆ ಪದ್ಮಶ್ರೀ, ಡಾ.ರಾಜ್‌ಕುಮಾರ್ ಪ್ರಶಸ್ತಿ, ಕನ್ನಡ ರಾಜ್ಯೋತ್ಸವ, ತಮಿಳುನಾಡು ಸರ್ಕಾರದಿಂದ ಕಲೈಮಾಣಿ ಪ್ರಶಸ್ತಿ, ಆಂಧ್ರ ಸರ್ಕಾರದಿಂದ ಎನ್‌ಟಿಆರ್ ಪ್ರಶಸ್ತಿಗೆ ಬಿ.ಸರೋಜಾದೇವಿ ಭಾಜನರಾಗಿದ್ದರು. ಅವರ ಅಭಿನಯ ಇಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ