Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ರಾಮರಾಜ್ಯದ ಪರಿಕಲ್ಪನೆಯೊಂದಿಗೆ ಕೆಲಸ ಮಾಡುತ್ತಿರುವೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*







ಬೆಳಗಾವಿ:* ಕಳೆದ ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಚಂದನ ಹೊಸೂರಿನಲ್ಲಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಮೇಶ್ವರ ದೇವಸ್ಥಾನ ನಿರ್ಮಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಚಂದನಹೊಸೂರು ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಚಿವರು, ಸುಮಾರು 2 ಕೋಟಿ ರೂಪಾಯಿ ವೆಚ್ಚದಲ್ಲಿ ದೇವಸ್ಥಾನ ಕಟ್ಟಡ ನಿರ್ಮಾಣವಾಗಲಿದ್ದು, ಈಗಾಗಲೇ ಮೊದಲನೇ ಹಂತದಲ್ಲಿ ೪೦ ಲಕ್ಷ ಹಾಗೂ ಎರಡನೇ ಹಂತದಲ್ಲಿ 40 ಲಕ್ಷ ಒಟ್ಟು 80 ಲಕ್ಷ ರೂ ಬಿಡುಗಡೆಗೊಂಡಿದ್ದು, ಇನ್ನುಳಿದ ಹಣ ಹಂತ ಹಂತವಾಗಿ ಬಿಡುಗಡೆಗೊಳ್ಳಲಿದೆ ಎಂದು ಹೇಳಿದರು.


ಕ್ಷೇತ್ರದ ಜನರ ಆಶೋತ್ತರಗಳು ಹಾಗೂ ಭಾವನೆಗಳನ್ನು ಅರ್ಥಮಾಡಿಕೊಂಡು ಕೆಲಸ ಮಾಡುತ್ತಿರುವೆ. ಕೇವಲ ಚುನಾವಣೆ ಸಮಯದಲ್ಲಿ ಗ್ರಾಮಗಳಿಗೆ ನಾನು ಬರುವುದಿಲ್ಲ. ಗ್ರಾಮದ ಅಭಿವೃದ್ಧಿ ಕೆಲಸಗಳಿಗೆ ಸ್ಪಂದಿಸದ ಕೆಲ ಮಂದಿ ಮೋದಿ ಹೆಸರು ಹೇಳಿಕೊಂಡು ಚುನಾವಣೆಯಲ್ಲಿ ವೇಳೆ ಮತ ಕೇಳಲು ಬರುತ್ತಾರೆ. ನಾನು ಜನರೊಂದಿಗೆ ಸದಾ ಒಡನಾಟ ಇಟ್ಟಿಕೊಂಡಿರುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.


ಕ್ಷೇತ್ರದಲ್ಲಿರುವ 114 ಗ್ರಾಮಗಳಲ್ಲಿ 140 ಗುಡಿಗಳನ್ನು ನಿರ್ಮಿಸಿರುವೆ. ರಾಮರಾಜ್ಯದ ಪರಿಕಲ್ಪನೆಯೊಂದಿಗೆ ಕೆಲಸ ಮಾಡುತ್ತಿರುವೆ. ಅಧಿಕಾರ ಯಾವತ್ತೂ ಶಾಶ್ವತ ಅಲ್ಲ, ಜನರೊಂದಿಗೆ ಒಡನಾಟ ಮುಖ್ಯ. ದಿನದ 24 ಗಂಟೆಯೂ ಕೆಲಸ ಮಾಡುತ್ತಿರುವೆ, ಪುರುಷ ಪ್ರಧಾನ ಸಮಾಜ, ಪುರುಷ ಪ್ರಧಾನ ರಾಜಕೀಯದಲ್ಲಿ ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಏಕೈಕ ಮಹಿಳಾ ಮಂತ್ರಿಯಾಗಿರುವೆ. ಇದಕ್ಕೆ ಜನರು ನೀಡಿದ ಬೆಂಬಲವೇ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಕಾರ್ಯಕ್ರಮದಲ್ಲಿ ಹಣಬರಟ್ಟಿಯ ಬಸವಲಿಂಗ ಶಿವಾಚಾರ್ಯರು, ಮುತ್ನಾಳ ಕೇದಾರ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯರು, ಚಂದನಹೊಸೂರು-ಸುತಗಟ್ಟಿ ಸಿದ್ದಲಿಂಗ ಶಿವಾಚರ್ಯ ಮಹಾಸ್ವಾಮಿಗಳು, ಬಡೇಕೊಳ್ಳಿಮಠದ ಶಿವಯೋಗಿ ನಾಗೇಂದ್ರ ಮಹಾ ಸ್ವಾಮಿಗಳು, ವೇದಮೂರ್ತಿ ಮಹೇಶ ಸ್ವಾಮಿಗಳು, ಗಂಗಯ್ಯ ಸ್ವಾಮಿಗಳು, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಸದೆಪ್ಪ ತಾಂಡ್ಸಿ, ನಾಮದೇವ ಜೋಗನ್ನವರ, ಚಂದ್ರಕಾಂತ ಶಿಲ್ಪಿಕಾರ, ಕಲ್ಮೇಶ್ ಪಾರ್ವತಿ, ರಾಯಪ್ಪ ತವಗದ, ನಾಗಲಿಂಗ ಬಡಿಗೇರ್, ಅಡಿವೆಪ್ಪ ಪಾಟೀಲ, ಶಿವಲಿಂಗ ಕರನಣ್ಣವರ, ಕಲ್ಮೇಶ ತಾಂಡ್ಸಿ ಹಾಗೂ ದೇವಸ್ಥಾನ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.











Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ