Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರಿಗೆ ಮೋಸ ಮಾಡಿದರೆ, ಹಗುರವಾಗಿ ಪರಿಗಣಿಸಿದರೆ ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌


*ಬೆಳಗಾವಿ:* ಅತ್ಯಂತ ಸ್ವಾಭಿಮಾನದ ಜೀವನ ನಡೆಸುವ ಮಹಿಳೆಯರಿಗೆ ಯಾರೂ ಮೋಸ, ಅನ್ಯಾಯ. ಮಾಡಲು ಹೋಗಬಾರದು. ಮಹಿಳೆಯರನ್ನು ಹಗುರವಾಗಿ ಪರಿಗಣಿಸುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಎಚ್ಚರಿಕೆ ನೀಡಿದರು.


ಬೆಳಗಾವಿಯ ಪಶು ಸಂಗೋಪನೆ ಇಲಾಖೆಯ ಸಭಾಭವನದಲ್ಲಿ ನಡೆದ ವಾರ್ಷಿಕ ಮಹಾಸಭೆ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಧಾರವಾಡದಲ್ಲಿ ನಡೆಯಲಿರುವ ಕೃಷಿ ಮೇಳ 2025 ರ ಕಾರ್ಯಕ್ರಮಕ್ಕೆ ತೆರಳುತ್ತಿರುವ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮಹಿಳಾ ಒಕ್ಕೂಟಕ್ಕೆ ಹಸಿರು ನಿಶಾನೆ ತೋರಿ ಮಾತನಾಡಿದ ಸಚಿವರು, ಇತ್ತೀಚೆಗೆ ಮೈಕ್ರೋ ಫೈನಾನ್ಸ್ ನವರು ಮಹಿಳೆಯರಿಗೆ ಮೋಸ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಜೊತೆಗೆ ಕೆಲವು ಅಧಿಕಾರಿಗಳೂ ಮಹಿಳೆಯರನ್ನು ಹಗುರವಾಗಿ ಪರಿಗಣಿಸುವುದನ್ನು ಕಾಣುತ್ತಿದ್ದೇವೆ. ಇಂತವುಗಳನ್ನು ಸಹಿಸಲು ಸಾಧ್ಯವಿಲ್ಲ ಎಂದ ಅವರು, ಯಾರಿಂದಲೂ ಮೋಸಕ್ಕೊಳಗಾಗಬೇಡಿ. ಎಚ್ಚರಿಕೆಯಿಂದಿರಿ ಎಂದು ಮಹಿಳೆಯರಿಗೆ ಕರೆ ನೀಡಿದರು.


ಮಹಿಳೆ ಎಂದರೆ ಸಂಕಷ್ಟ, ಕೆಲಸ ಮಾಡಿ ಸ್ವಾಭಿಮಾನದ ಬದುಕಿಗಾಗಿ ಸಂಘ ಕಟ್ಟಿದ್ದೀರಿ. ಮಹಿಳೆ ತೊಟ್ಟಿಲು ತೂಗುವ ಕೈ ಜಗತ್ತನ್ನೇ ಆಳಬಹುದು ಎಂದು ಸಾಧನೆ ಮಾಡಿ ತೋರಿಸಿದ್ದೀರಿ, ಮಹಿಳೆಯರ ಸಾಧನೆಯನ್ನು ಗುರುತಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಸಚಿವರು ಹೇಳಿದರು.


ಕಾಂಗ್ರೆಸ್‌ ಸರ್ಕಾರ ಬಂದಾಗಲೆಲ್ಲಾ ಮಹಿಳೆಯರಿಗೆ ಅನುಕೂಲಕರ ಯೋಜನೆಗಳನ್ನು ರೂಪಿಸಿದೆ. ನರೇಗಾ ಮಾಡಿದ್ದು ಕಾಂಗ್ರೆಸ್, ಸ್ಥಳೀಯ ಸಂಸ್ಥೆಗಳಲ್ಲಿ 50% ಮೀಸಲಾತಿ, ಬಿಸಿಯೂಟ ಯೋಜನೆ, ಆಶಾ ಕಾರ್ಯಕರ್ತೆರ ನೇಮಕ, ಗೃಹಲಕ್ಷ್ಮೀ ಯೋಜನೆ ಇವೆಲ್ಲವೂ ಕಾಂಗ್ರೆಸ್‌ನ ಯೋಜನೆಗಳು. ಮನೆ ಬೆಳಗುವುದೂ ಮಹಿಳೆಯರಿಂದಲೇ, ಆದ್ದರಿಂದ ಮಹಿಳೆಯ ಕೈಗೆ ಸ್ವಾಭಿಮಾನದ ಅಧಿಕಾರ ಕೊಡಬೇಕು ಎಂದರು.


 ಬ್ರಿಟೀಷರು ಭಾರತ ಬಿಟ್ಟು ಹೋಗುವಾಗ ನಮಗೆ ಊಟ ಮಾಡಲು ಗತಿ ಇರಲಿಲ್ಲ. ಇಂದು ಸ್ವಾಭಿಮಾನದ ಸ್ಥಿತಿಗೆ ಬಂದಿದೆ. ಇದು ಕಾಂಗ್ರೆಸ್ ಸಾಧನೆ, ಖಾಸಗಿ ಫೈನಾನ್ಸ್ ಹಾವಳಿಗೆ ಮೋಸಕ್ಕೆ ಬಲಿಯಾಗಬೇಡಿ, ಸಂಜೀವಿನಿ ಸಂಘದವರು ಮಹಿಳೆಯರಿಗೆ ಸಹಾಯ ಮಾಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.


ಮಹಿಳೆಯರಿಗೆ ನ್ಯಾಯ ಕೊಡಬೇಕು, ಸಹಕಾರ ಕೊಡಬೇಕು, ಮಹಿಳೆಯರನ್ನು ಯಾರೂ ಹಗುರವಾಗಿ ಪರಿಗಣಿಸಬೇಡಿ. ಮಹಿಳೆ ಅಬಲೆಯಲ್ಲ ಸಬಲೆ ಎಂದು ನಿರೂಪಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.


ಈ ವೇಳೆ ನಿರ್ಮಲಾ ತಿಗಡಿ, ಮಲ್ಲಿಕಾರ್ಜುನ ಕೆಳಕರ್, ಡಾ.ಆನಂದ ಪಾಟೀಲ, ಡಾ.ರವಿ ಸಾಲಿಗೌಡರ್, ಪ್ರದೀಪ್ ಸಾವಂತ, ಮಹಾದೇವ್ ಪಟಗುಂದಿ, ಮಹೇಶ ಭಜಂತ್ರಿ, ಸಂಘದ ಸದಸ್ಯೆಯರು, ಪಶು ಸಖಿಯರು, ಕೃಷಿ ಸಖಿಯರು ಮುಂತಾದವರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ