LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿಗರಿಂದ ಕೋಮು ಸೌಹಾರ್ದ ಕದಡುವ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ‌ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.


ನೀರೆ ಗ್ರಾಮ ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,  ಸರ್ಕಾರವನ್ನ ಹಿಂದು ವಿರೋಧಿ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು‌.


ಸರ್ಕಾರದ ವಿರುದ್ಧ ಆರೋಪ ಮಾಡಲು ವಿಪಕ್ಷಗಳಿಗೆ ಬೇರೆ ವಿಚಾರ ಇಲ್ಲ. ರಾಜ್ಯ ಸರ್ಕಾರ ಬೀಳುತ್ತದೆ, ಗ್ಯಾರಂಟಿ ಯೋಜನೆಗಳು ಜಾರಿ ಆಗಲ್ಲ, ಒಂದು ವೇಳೆ ಜಾರಿಯಾದರೂ ನಾಲ್ಕು ತಿಂಗಳಿಗೆ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂದು ಅಪಪ್ರಚಾರ ಮಾಡಲಾಯಿತು. ರಾಜ್ಯದ ಜನತೆಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲ  ಮಾಡಿಕೊಟ್ಟಿದೆ. ಇದನ್ನು ಸಹಿಸದ ಬಿಜೆಪಿ ನಾಯಕರು ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.


ಬಿಜೆಪಿ ಶಾಸಕ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲಿಸಿರುವುದಕ್ಕೆ ವಿಪಕ್ಷಗಳು ಖಂಡಿಸಿರುವ ವಿಚಾರಕ್ಕೆ‌ ಪ್ರತಿಕ್ರಿಯಿಸಿದ ಸಚಿವರು, ಅವರು ದ್ವೇಷಪೂರಿತ ಭಾಷಣ ಮಾಡಿದರೆ ಕ್ರಮ ಕೈಗೊಳ್ಳಲು ವಿಧಾನಸಭೆಯಲ್ಲಿ ಶಾಸನ ತರಲಾಗಿದೆ. ದ್ವೇಷ ಪೂರಿತ ಭಾಷಣವನ್ನು ‌ಬಿಜೆಪಿ- ಕಾಂಗ್ರೆಸ್ ನಾಯಕರು ಯಾರೇ ಆಗಲಿ ಕ್ರಮ ಕೈಗೊಳ್ಳಲಾಗುತ್ತದೆ. ನಾಳೆ ಕಾಂಗ್ರೆಸ್ಸಿಗರು ಮಾತನಾಡಿದರು ಕ್ರಮ ಆಗುತ್ತದೆ. ಕಾನೂನು ಎಲ್ಲರಿಗೂ ಒಂದೇ ಅಲ್ವಾ!? ಶಾಂತಿಯನ್ನು ಕದಡುವ ಕೆಲಸ ಮಾಡಿದರೆ ಖಂಡಿತ ಎಫ್ ಐ ಆರ್ ಆಗುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ನಾನು‌ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ, ಧರ್ಮಸ್ಥಳ ನಮ್ಮೆಲ್ಲರ ಆರಾಧ್ಯ ಸ್ಥಳ, ಬಹಳಷ್ಟು ಭಕ್ತಿಯಿಂದ ನಡೆದುಕೊಳ್ಳುವ ಸ್ಥಳ. ಏನೆಲ್ಲಾ ಷಡ್ಯಂತ್ರ ಆಗಿದೆ, ಇದೆಲ್ಲಾ ಹೊರ ಬರುತ್ತೆ ಸ್ವಲ್ಪ ಕಾಯಿರಿ. ಎಸ್ಐಟಿ ತನ್ನ ಕೆಲಸ ಮಾಡುತ್ತಿದೆ. ಇದನ್ನು ಸಾರ್ವಜನಿಕವಾಗಿ ಹೇಳಲು ಬರಲ್ಲ. ಸ್ವಲ್ಪ ದಿನ ಕಾಯಿರಿ ಎಲ್ಲಾ ಸತ್ಯಾಸತ್ಯತೆ ಹೊರಬರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ