Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್




ಉಡುಪಿ:* ಭಾರತ ದೇಶ ಹಳ್ಳಿಗಳ ದೇಶ, ಗ್ರಾಮಗಳು ಅಭಿವೃದ್ಧಿಯಾದರೆ, ದೇಶ ಅಭಿವೃದ್ಧಿಯಾದಂತೆ. ಗ್ರಾಮಗಳ ವಿಕಸನವೇ ರಾಜೀವ್ ಗಾಂಧಿ ಅವರ ಕನಸಾಗಿತ್ತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಉಡುಪಿ ಜಿಲ್ಲಾ ಪಂಚಾಯತ್, ಕಾಪು ತಾಲೂಕು ಪಂಚಾಯತ್ ವತಿಯಿಂದ ಮಜೂರು ಗ್ರಾಮ ಪಂಚಾಯತ್ ನ ನವೀಕೃತ ಸಭಾ ಭವನದ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಮಾಡಬಾರದು, ‌ಇದಕ್ಕಾಗಿಯೇ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ‌ಪಕ್ಷಗಳ ಚಿಹ್ನೆ ಇರುವುದಿಲ್ಲ ಎಂದರು.


ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳ ಹೊಣೆಗಾರಿಕೆ ಅತ್ಯಂತ ಪ್ರಮುಖವಾದದ್ದು. ಇದು ಪರಿಣಾಮಕಾರಿ ಆಡಳಿತ, ಸಮುದಾಯದ ಸಹಭಾಗಿತ್ವ ಮತ್ತು ಸುಸ್ಥಿರ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.


ರಾಜೀವ ಗಾಂಧಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಕೇಂದ್ರೀಕರಣ ವ್ಯವಸ್ಥೆಯನ್ನು ಜಾರಿಗೆ ತಂದರು. ಗ್ರಾಮಗಳು ಸಬಲೀಕರಣಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಅವರು ಬಲವಾಗಿ ನಂಬಿದ್ದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


 ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಸಹ ಪಂಚಾಯಿತಿ ವ್ಯವಸ್ಥೆಗೆ ಬಲ ತುಂಬಲಾಯಿತು. ನರೇಗಾ ಯೋಜನೆ ಬಂದ ನಂತರ ಗ್ರಾಮ ಪಂಚಾಯಿತಿಗಳ ಬಲವರ್ಧನೆಯಾಗಿದೆ. ಬೀದಿ ದೀಪಗಳ ಬಿಲ್ ತುಂಬುವ ಶಕ್ತಿಯೂ ಇಲ್ಲದ ಪಂಚಾಯಿತಿಗಳು ಇಂದು ಸಾಕಷ್ಟು ಅನುದಾನ ಪಡೆಯುತ್ತಿವೆ ಎಂದರು.


ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಅತ್ಯಂತ ಮಹತ್ವದ್ದು. ಈ ಹಿಂದೆ ಗ್ರಾಮ ಪಂಚಾಯಿತಿ ಕಚೇರಿಗೆ ಯಾವುದೇ ಕೆಲಸ ಅರಸಿ ಬರುವವರ ಸಂಖ್ಯೆ ತುಂಬಾ ಕಡಿಮೆಯಾಗಿತ್ತು. ಆದರೆ, ಈಗ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದಲೇ ಕೋಟ್ಯಾಂತರ ರೂಪಾಯಿಗಳ ಕಾಮಗಾರಿಗಳು ನಡೆಯುತ್ತಿವೆ ಎಂದು ಸಚಿವರು ಹೇಳಿದರು.


ಸಮಾರಂಭದಲ್ಲಿ ಉಡುಪಿ-ಚಿಕ್ಕಮಗಳೂರು‌ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಧಿಕಾರಿ ರಶ್ಮಿ, ತಹಶಿಲ್ದಾರ್ ಡಾ.ಪ್ರತಿಭಾ, ತಾಲೂಕು ಪಂಚಾಯತ್ ಸಿಇಒ ಜೇಮ್ಸ್ವಡಿ'ಸಿಲ್ವ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ