Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗಳಾ ಅಂಗಡಿಗೆ ರಾಜಕೀಯ ಅನುಭವದ ಕೊರತೆ ಇದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್





ಬೆಳಗಾವಿ,ಏ.01: ಬೆಳಗಾವಿ ಲೋಕಸಭೆ ಕದನದಲ್ಲಿ ಏಟು-ಎದುರೇಟು ಜೋರಾಗಿದೆ. ಪತ್ರಿಕಾ ಪ್ರಕಟಣೆ ಮೂಲಕ ತಮಗೆ ಟಾಂಗ್ ಕೊಟ್ಟಿದ್ದ ಸಂಸದೆ ಮಂಗಳಾ ಅಂಗಡಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕೂಡ ತಿರುಗೇಟು ಕೊಟ್ಟಿದ್ದಾರೆ.‌

ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ನಾನು ಮಹಿಳಾ ಕೋಟಾದಿಂದ ಸಚಿವೆಯಾಗಿರುವೆ ಹೊರತು, ಯಾರ ಸಚಿವ ಸ್ಥಾನವನ್ನೂ ಕಸಿದುಕೊಂಡಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಹಿರಿಯರಿದ್ದರೂ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಂದ ಸಚಿವ ಸ್ಥಾನ ಕಸಿದುಕೊಂಡಿದ್ದಾರೆ' ಎಂಬ ಸಂಸದೆ ಮಂಗಳಾ ಅಂಗಡಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

ಇಷ್ಟು ದಿನ ಸೈಲೆಂಟ್ ಆಗಿಯೇ ಇದ್ದ ಸಂಸದೆ ಮಂಗಳಾ ಅಂಗಡಿ ಈಗ ಪಕ್ಷ ಹಾಗೂ ಸಿದ್ಧಾಂತ ಕುರಿತು ಮೌನ ಮುರಿದಿದ್ದಾರೆ. ನಿನ್ನೆ ಹೊರಡಿಸಿದ್ದ ಪತ್ರಿಕಾ ಪ್ರಕಟಣೆಯಲ್ಲಿ ''ನಮ್ಮ ಕುಟುಂಬ ಯಾವತ್ತೂ ಬಿಜೆಪಿ ಸಿದ್ಧಾಂತ ನಂಬಿ ರಾಜಕೀಯ ಮಾಡಿದೆ. ಸುರೇಶ್ ಅಂಗಡಿಯವರು ಸಹ ಬಿಜೆಪಿ ತತ್ವದಂತೆ ಬದುಕಿ ಧೀಮಂತ ರಾಜಕಾರಣಿ ಆಗಿದ್ದರು. ಅವರ ನಂತರ ಪಕ್ಷ ನನಗೆ ಅವಕಾಶ ಕೊಟ್ಟಿತ್ತು. ಈ ಬಾರಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಹೇಳಿದಾಗ, ತಕ್ಷಣ ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತಳಾಗಿ ಸಂತೋಷದಿಂದ ಒಪ್ಪಿಕೊಂಡೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜನರ ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ, ಕ್ಷುಲ್ಲಕ ಹೇಳಿಕೆ ಕೊಡುವ ಬದಲು ಸಚಿವ ಸ್ಥಾನಕ್ಕೆ ಗೌರವ ತರುವ ಮಾತು ಆಡಬೇಕು.














ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲೆಯ ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೇ ಸಲ ಶಾಸಕಿ ಆಗುತ್ತಲೇ ಸಚಿವೆ ಆಗಿದ್ದೀರಿ. ಜಿಲ್ಲೆಯಲ್ಲಿ ನಿಮಗಿಂತ ಹಿರಿಯರಾದ ಮಹಾಂತೇಶ್ ಕೌಜಲಗಿ, ಅಶೋಕ ಪಟ್ಟಣ ಅವರಿಂದ ಸಚಿವ ಸ್ಥಾನವನ್ನು ನೀವು ಕಿತ್ತುಕೊಂಡಿದ್ದೀರಿ. ಈ ವಿಷಯವನ್ನು ಈವರೆಗೆ ನಾವು ಪ್ರಸ್ತಾಪ ಮಾಡಿರಲಿಲ್ಲ. ಅಲ್ಲದೇ ಜಿಲ್ಲೆಯ ಜನರಿಗೆ ಈ ವಿಷಯ ಚೆನ್ನಾಗಿದೆ ಗೊತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ವೈಯಕ್ತಿಕ ವಿಚಾರ ಬಿಟ್ಟು ಸಮಷ್ಟಿ ಪ್ರಜ್ಞೆಯಿಂದ ರಾಜಕೀಯ ಮಾಡುವುದನ್ನು ರೂಡಿ ಮಾಡಿಕೊಳ್ಳುವುದು ಒಳಿತು'' ಎಂದು ಮಂಗಳಾ ಅಂಗಡಿ ವಾಗ್ದಾಳಿ ಮಾಡಿದ್ದರು.






ಮಂಗಳಾ ಅಂಗಡಿ ಹೇಳಿಕೆಗೆ ತಿರುಗೇಟು ನೀಡಿರುವ ಲಕ್ಷ್ಮಿ ಹೆಬ್ಬಾಳ್ಕರ್ , ಬಿಜೆಪಿಯಲ್ಲಿ ಇಷ್ಟೊಂದು ಜನ ಆಕಾಂಕ್ಷಿಗಳು ಇದ್ದರು. ಮಂಗಳಾ ಅಂಗಡಿ ಬೇರೆಯವರಿಗೆ ಬೆಂಬಲಿಸಬಹುದಾಗಿತ್ತು. ಕುಟುಂಬಕ್ಕಿಂತ ಪಕ್ಷ ಮೊದಲು ಎನ್ನುವ ಮಂಗಳಾ ಅಂಗಡಿ ಅವರು ಏಕೆ ಬೀಗರ ಪರ ನಿಂತಿದ್ದಾರೆ‌. ಪಕ್ಷ ಮೊದಲು ಎಂದು ಜನರ ದಿಕ್ಕು ತಪ್ಪಿಸಲು ಹೇಳುತ್ತಿದ್ದಾರೆ. ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಬಹುದಿತ್ತು. ಇದೆಲ್ಲ ಸುಮ್ಮನೆ ನಾಟಕ. ಬೀಗರ ಪರ ಮಂಗಳಾ ಅಂಗಡಿ ಬ್ಯಾಟಿಂಗ್ ವಿಚಾರ ಇದು ಸತ್ಯ. ಇಡೀ ಕ್ಷೇತ್ರದ ಜನ ಇದನ್ನು ಹೇಳುತ್ತಿದ್ದಾರೆ ಎಂದರು.

ಮಂಗಳಾ ಅಂಗಡಿ ವಯಸ್ಸಿನಲ್ಲಿ ಹಿರಿಯರು. ಆದರೆ, ಅವರಿಗೆ ರಾಜಕೀಯ ಅನುಭವ ಕಡಿಮೆ. ಸುರೇಶ ಅಂಗಡಿ ದಿವಂಗತರಾದ ಬಳಿಕ ಉಪಚುನಾವಣೆಯಲ್ಲಿ ಗೆದ್ದರು. ಅವರ ಬಗ್ಗೆ ಯಾಕೆ ಸಿಂಪತಿ ಇದೆ ಎಂದರೆ, ಕೇಂದ್ರದಲ್ಲಿ ಮೋದಿಯವರು ಮಹಿಳಾ ಮೀಸಲಾತಿ ಬಗ್ಗೆ ‌ಮಾತನಾಡುತ್ತಾರೆ. ಇಂಥ ಸಂದರ್ಭದಲ್ಲಿ ಮಂಗಳಾ ಅಂಗಡಿ, ಸುಮಲತಾಗೆ ಟಿಕೆಟ್ ಕೊಡಲಿಲ್ಲ. ಹಾಗಾಗಿ, ಬೀಗರ ಟಿಕೆಟ್ ಶೆಟ್ಟರ್ ತಪ್ಪಿಸಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ ಎಂದರು.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ