Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ





ಬೆಂಗಳೂರು* : 2011-12ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಯುಕ್ತ ಸಂಘರ್ಷ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳ ವತಿಯಿಂದ 2011-12 ನೇ ಸಾಲಿನಿಂದ ನಿವೃತ್ತಿಯಾಗಿರುವ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಚಿವರು, ಈ ಸಂಬಂಧ ಶೀಘ್ರವೇ ನಿಯೋಗದೊಂದಿಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಾಗುವುದು ಎಂದರು.

ಇಲಾಖೆಯಲ್ಲಿ ಕೆಲ ಅಧಿಕಾರಿಗಳ ಅಚಾತುರ್ಯದಿಂದ 2011ನೇ ಸಾಲಿನ ಬದಲಾಗಿ 2023ನೇ ಸಾಲಿನಿಂದ ಗ್ರ್ಯಾಚುಟಿ ಜಾರಿಗೆ ಬಂದಿದೆ.‌ ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಲಾಗುವುದು. ಈಗಾಗಲೇ 3-4 ಬಾರಿ ಹಣಕಾಸು ಇಲಾಖೆಯವರ ಜೊತೆ ಮಾತುಕತೆ ನಡೆಸಲಾಗಿದೆ. ಮುಖ್ಯಮಂತ್ರಿ ಅವರ ಜೊತೆ ಮಾತುಕತೆ ನಡೆಸಿ  ಈ ಸಮಸ್ಯೆಯನ್ನು ಬಗೆ ಹರಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.


ಕರ್ನಾಟಕದಲ್ಲಿ ಅಂಗನವಾಡಿ ಆರಂಭವಾಗಿ 50 ವರ್ಷಗಳಾಗಿದ್ದು, ನವೆಂಬರ್ 19 ರಂದು ಬೆಂಗಳೂರಿನಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.


ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಸಮಿತಿ ಅಧ್ಯಕ್ಷರಾದ ಜಿ.ಆರ್.ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಬಿ.ನಾಗರತ್ನಮ್ಮ, ಎಐಯುಟಿಯುಸಿ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಎಐಟಿಯುಸಿ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಪ್ರಧಾನ ಕಾರ್ಯದರ್ಶಿ ಎಂ.ಉಮಾದೇವಿ ಸೇರಿದಂತೆ ಸಂಘಟನೆಯ ನೂರಾರು ‌ಮಂದಿ ಉಪಸ್ಥಿತರಿದ್ದರು.








Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ