Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲ್ಯವಿವಾಹ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್




ಬೆಂಗಳೂರು: ಬಾಲ್ಯ ವಿವಾಹವನ್ನು ತಡೆಗಟ್ಟಲು ಪಾಲಕರ ಸಹಕಾರ ಅತ್ಯಗತ್ಯ. ಎಲ್ಲರೂ ಸಹಕರಿಸಿದರೆ  ಬಾಲ್ಯವಿವಾಹ ತಡೆಗಟ್ಟಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.


ಬೆಂಗಳೂರಿನ ಗೃಹ ಕಚೇರಿಯಲ್ಲಿ ವಿಜಯನಗರ ಜಿಲ್ಲೆ ಭೀಮಾ ಸಂಘ, ಕಿಶೋರಿಯರ ಸಂಘ, ಯುವ ಧ್ವನಿ ಒಳಗೊಂಡ The Concerned for  Working Children ಎನ್ನುವ ಸ್ವಯಂ ಸೇವಾ ಸಂಸ್ಥೆಯ ಸದಸ್ಯರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.


ಬಾಲ್ಯವಿವಾಹ ತಡೆಯುವುದು ಕೇವಲ ನಮ್ಮ ಇಲಾಖೆಯ ಕೆಲಸವಲ್ಲ. ಹಲವು ಇಲಾಖೆಗಳ ವ್ಯಾಪ್ತಿಗೆ ಬರುತ್ತದೆ. ಬಾಲ್ಯವಿವಾಹಕ್ಕೆ ಮನೆಯ ಆರ್ಥಿಕ ಪರಿಸ್ಥಿತಿ, ಪ್ರೇಮ ವಿವಾಹ, ಸಿನಿಮಾ ಎಫೆಕ್ಟ್ ಕೂಡ  ಕಾರಣವಾಗುತ್ತದೆ. ಎಲ್ಲರೂ ಸೇರಿ ಬಾಲ್ಯ ವಿವಾಹ ತಡೆಯಲು ಪ್ರಯತ್ನಿಸೋಣ ಎಂದರು.


ಹದಿಹರೆಯದ ಮಕ್ಕಳ ಹಾಗೂ ಯುವಜನರಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಪೌಷ್ಟಿಕಾಂಶದ ಆಹಾರ ಪದಾರ್ಥಗಳ ವಿತರಣೆ ಹಾಗೂ ಶುಚಿ ಪ್ಯಾಡ್ ಗಳ ವಿತರಣೆ, ಮಕ್ಕಳಿಗೆ ಶಿಕ್ಷಣ ಅಥವಾ ಉದ್ಯೋಗಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ವೇಳೆ ತಂದೆ ಹೆಸರನ್ನು ಕಡ್ಡಾಯವಾಗಿ ನಮೂದಿಸಬೇಕಾಗಿರುವುದು, ಮದ್ಯ ಮಾರಾಟ, ವಿಕಲ ಚೇತನ ಮಕ್ಕಳಿಗೆ ಅಗತ್ಯ ಸೌಲಭ್ಯಗಳ ಕೊರತೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಎನ್ ಜಿಒ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.


ಈ ವೇಳೆ ಸಹ ನಿರ್ದೇಶಕರಾದ ಕೃಪಾ ಎಂ.ಎಂ, ಕಾರ್ಯಕಾರಿ ನಿರ್ದೇಶಕರಾದ ಕವಿತಾ ರತ್ನ, ಸಂಯೋಜಕರಾದ ದೀಪ್ತಿ ಹಾಗೂ ವಿಜಯನಗರದ ಸ್ನೇಹ ಫೌಂಡೇಶನ್, ಸಖಿ ಟ್ರಸ್ಟ್ ಕಾರ್ಯಕರ್ತರು, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಜಂಟಿ ನಿರ್ದೇಶಕರಾದ ಅಕ್ಕಮಹಾದೇವಿ ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ