Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೊಲ್ಲಾಪುರ, ಲಾತೂರು ಕ್ಷೇತ್ರಗಳಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಬ್ಬರದ ಪ್ರಚಾರ

 

ಕನ್ನಡ, ಮರಾಠಿ, ಹಿಂದಿ ಭಾಷೆಯಲ್ಲಿ ನಿರರ್ಗಳ ಮಾತುಗಳ ಮೂಲಕ ಮತ ಯಾಚನೆ

ಕಾಂಗ್ರೆಸ್ ಬಡವರ ಬಗ್ಗೆ ಯೋಚಿಸಿದರೆ ಬಿಜೆಪಿ ಅಂಬಾನಿ, ಅದಾನಿ ಬಗ್ಗೆ ಯೋಚಿಸುತ್ತದೆ ಎಂದ ಸಚಿವೆ

ಸೊಲ್ಲಾಪುರ: ಮಹಾರಾಷ್ಟ್ರ ವಿಧಾನಸಭ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ವಿಕಾಸ ಅಘಾಡಿ ಪರ ಪ್ರಚಾರದಲ್ಲಿ ನಿರತರವಾಗಿರುವ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸೋಲ್ಲಾಪುರ ಮತ್ತು ಲಾತೂರು ಕ್ಷೇತ್ರಗಳಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಶನಿವಾರ ಸೊಲ್ಲಾಪುರ ಕ್ಷೇತ್ರದ ಹಲವು ಭಾಗಗಳಲ್ಲಿ ಸಭೆ ನಡೆಸಿದ ಹೆಬ್ಬಾಳಕರ್, ಭಾನುವಾರ ಲಾತೂರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸ್ಥಳೀಯ ಮುಖಂಡರೊಂದಿಗೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು ವಿಶೇಷವಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಜಾರಿಗೊಳಿಸಿರುವ ಪಂಚ ಗ್ಯಾರಂಟಿ, ಗೃಹಲಕ್ಷ್ಮೀ ಯೋಜನೆಯ ಸಮರ್ಪಕ ಜಾರಿ ಕುರಿತು ಮತದಾರರಿಗೆ ಮನವರಿಕೆ ಮಾಡಿಕೊಡುತ್ತಿದ್ದಾರೆ.

ಕನ್ನಡ, ಮರಾಠಿ ಹಾಗೂ ಹಿಂದಿ ಭಾಷೆಯ ನಿರರ್ಗಳ ಮಾತುಗಳ ಮೂಲಕ ಲಕ್ಷ್ಮೀ ಹೆಬ್ಬಾಳಕರ್ ಅವರು ಅಲ್ಲಿನ ಮತದಾರರ ಮನ ಗೆಲ್ಲುತ್ತಿದ್ದಾರೆ.

ಕಾಂಗ್ರೆಸ್ ಪಕ್ಷ ಬಡವರ ಬಗ್ಗೆ ಯೋಚಿಸಿದರೆ ಬಿಜೆಪಿ ಅಂಬಾನಿ, ಅದಾನಿ ಬಗ್ಗೆ ಯೋಜಿಸುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸಿಲೆಂಡರ್ ದರವನ್ನು 400 ರೂ.ಗಳಿಂದ 1300 ರೂ.ಗೆ ಏರಿಸಲಾಗಿದೆ. ಬಡವರು, ಮಹಿಳೆಯರಿಗೆ ಸಹಾಯ ಮಾಡುವುದನ್ನು ಬಿಜೆಪಿಯವರಿಗೆ ನೋಡಲು ಸಾಧ್ಯವಿಲ್ಲ. ನಾವು ಜಾರಿಗೆ ತಂದಿರುವ ಬಡವರ ಪರ, ಮಹಿಳೆಯರ ಪರ ಯೋಜನೆಗಳನ್ನು ಟೀಕಿಸಿ, ನಂತರ ಅವುಗಳನ್ನು ನಕಲು ಮಾಡುತ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.

ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಜಾರಿಗೊಳಿಸುತ್ತಿದೆ. ಅದರಲ್ಲೂ ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ ಯೋಜನೆ ಮೂಲಕ ಈವರೆಗೆ 35 ಸಾವಿರ ಕೋಟಿ ರೂ.ಗಳನ್ನು ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ಕೂಡ ಅಧಿಕಾರಕ್ಕೆ ಬಂದಲ್ಲಿ ಇಂತದ್ದೇ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ಅಂಬೇಡ್ಕರ್ ತತ್ವದಂತೆ, ಬಸವಣ್ಣನವರ ತತ್ವದಂತೆ ನಾವು ಆಡಳಿತ ನಡೆಸುತ್ತೇವೆ. ದೇಶದಲ್ಲಿ ಯಾವ್ಯಾವಾಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆಯೋ ಆಗೆಲ್ಲ ಸರ್ವ ಭಾಷಿಕರು, ಸರ್ವ ಜಾತಿಯಯವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸವನ್ನು ಮಾಡುತ್ತಿದೆ ಎಂದು ಅವರು ಹೇಳಿದರು.



ಶನಿವಾರ ಸಂಜೆ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಸೊಲ್ಲಾಪುರ ಶಹರದಲ್ಲಿ, ಇಂದಿರಾ ನಗರ, ಕಿಸಾನ್ ನಗರಗಳಲ್ಲಿ ಶನಿವಾರ ಸಂಜೆ ಮಹಾ ವಿಕಾಸ ಅಘಾಡಿಯ ಕಾಂಗ್ರೆಸ್ ಅಭ್ಯರ್ಥಿ ಚೇತನ ಪಂಡಿತ್ ನರೋಟೆ ಪರ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈ ವೇಳೆ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ, ಕೇಂದ್ರದ ಮಾಜಿ ಗೃಹ ಸಚಿವ ಸುಶೀಲ್ ಕುಮಾರ ಶಿಂಧೆ, ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ, ಪ್ರಣತಿ ತಾಯಿ ಶಿಂಧೆ, ಶ್ರೀದೇವಿ ಫುಲಾರೆ, ವಿನೋದ್ ಬೋಸಲೆ, ಶಕೀಲ್ ಮಾಳ್ವಿ, ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ