ಬೆಂಗಳೂರು, ಮಾರ್ಚ್ 31: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ . ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ ಹೊರಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ 125ನೇ ವರ್ಷಾಚರಣೆ ಸಂದರ್ಭದಲ್ಲಿಯೇ ಈ ಮಹತ್ವದ ಕೇಂದ್ರ ಇಲ್ಲಿ ಆರಂಭವಾಗುತ್ತಿರುವುದು ಮತ್ತೊಂದು ಗಮನಾರ್ಹ ಸಂಗತಿಯಾಗಿದೆ.
ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಈ ಅಂಗಾಂಗ ಮರು ಪಡೆಯುವಿಕೆ ಕೇಂದ್ರವು ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಸೋಮವಾರ ಮಾಹಿತಿ ನೀಡಿದ್ದಾರೆ.
“ಕಸಿ ಮಾಡಲು ಅಂಗಾಂಗಗಳ ಖರೀದಿಯನ್ನು ಸುಗಮಗೊಳಿಸುವ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರವು ಆಸ್ಪತ್ರೆಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.