LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪಿಎಂ ಕುಸುಮ್ ಯೋಜನೆಗೆ ಕರ್ನಾಟಕದಿಂದಲೇ ಹೆಚ್ಚು ರೈತರ ಬೇಡಿಕೆ : ಸಚಿವ ಪ್ರಲ್ಹಾದ ಜೋಶಿ

ನವದೆಹಲಿ, ಆಗಸ್ಟ್​.07: ಪಿಎಂ ಕುಸುಮ್ ಯೋಜನೆಯಡಿ  ಸೋಲಾರ್ ಪಂಪ್ಸೆಟ್ ಅಳವಡಿಕೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ  ಅವರು ತಿಳಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಕರ್ನಾಟಕದಿಂದ ನಮಗೆ ಬರೋಬ್ಬರಿ 1,79,588 ಸೋಲಾರ್ ಪಂಪ್‌ ಅಳವಡಿಕೆಗೆ ಬೇಡಿಕೆ ಬಂದಿದೆ ಎಂದು ವಿವರಿಸಿದರು.

ವಿಫಲವಾಗಿದ್ರೆ ಬೇಡಿಕೆ ಏಕಿರುತ್ತಿತ್ತು? ವಿಪಕ್ಷದವರು ಪಿಎಂ ಕುಸುಮ್ ಯೋಜನೆ ಬಗ್ಗೆ ಇಲ್ಲ-ಸಲ್ಲದ ಮಾತನಾಡುತ್ತಾರೆ. ಹಾಗೊಂದು ವೇಳೆ ಈ ಯೋಜನೆ ವಿಫಲವಾಗಿದ್ದರೆ ಪ್ರಸ್ತುತ ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕ ಸರ್ಕಾರದವರು ಏಕೆ ಅಧಿಕೃತವಾಗಿ ನಮಗೆ ಇಷ್ಟೊಂದು ಬೇಡಿಕೆ ಕಳುಹಿಸುತ್ತಿದ್ದರು? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಪಿಎಂ ಕುಸುಮ್ ಯೋಜನೆಯನ್ನು 2019ರಲ್ಲಿ ಪ್ರಾರಂಭಿಸಿದ್ದು, ಸ್ವತಂತ್ರ ಸೋಲಾರ್ ಪಂಪ್‌ಗಳ ಸ್ಥಾಪನೆಗೆ ರೈತರಿಗೆ ಹಣಕಾಸಿನ ನೆರವು ಕೂಡ ನೀಡಲಾಗಿದೆ. ರೈತರಿಗೆ ಇದು ಆಶಾದಾಯಕ ವಾಗಿದೆ. ಇನ್ನು, ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಗೆ ಜನರಿಂದ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜುಲೈ 2024ರವರೆಗೆ 1.30 ಕೋಟಿಗೂ ಹೆಚ್ಚು ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್