Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದ ಆಂತರಿಕ ವಿಷಯಗಳಲ್ಲಿ ಪಾಶ್ಚಿಮಾತ್ಯ ಮಾಧ್ಯಮಗಳ ಹಸ್ತಕ್ಷೇಪ: ಸಚಿವ ಎಸ್. ಜೈಶಂಕರ್ ಕಿಡಿ

ಹೈದರಾಬಾದ್,24: ಎರಡನೇ ಹಂತದ ಲೋಕಸಭೆ ಚುನಾವಣೆಗೆ ಮುನ್ನ, ಭಾರತದ ಆಂತರಿಕ ವಿಷಯಗಳಲ್ಲಿ ಪಾಶ್ಚಿಮಾತ್ಯ ಮಾಧ್ಯಮಗಳ ಹಸ್ತಕ್ಷೇಪದ ಕುರಿತು ಭಾರತವು ಖಾರವಾಗಿಯೇ ಟೀಕಿಸಿದೆ. ಮಂಗಳವಾರ ಹೈದರಾಬಾದ್‌ನಲ್ಲಿ ರಾಷ್ಟ್ರೀಯವಾದಿ ಚಿಂತಕರ ವೇದಿಕೆ ಉದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು, ಪಾಶ್ಚಿಮಾತ್ಯ ಮಾಧ್ಯಮಗಳ ಟೀಕೆಗಳ ವಿರುದ್ಧ ಗರಂ ಆಗಿದ್ದಾರೆ.


''ನಮ್ಮ ಲೋಕಸಭಾ ಚುನಾವಣೆ ಕುರಿತು ಪಾಶ್ಚಿಮಾತ್ಯ ಮಾಧ್ಯಮಗಳು ಮನಬಂದಂತೆ ಟೀಕೆ ಮಾಡುತ್ತಿವೆ. ಅವರು ನಮ್ಮ ಪ್ರಜಾಪ್ರಭುತ್ವವನ್ನು ಟೀಕಿಸಿರುವುದು ಮಾಹಿತಿಯ ಕೊರತೆಯಿಂದಲ್ಲ. ಏಕೆಂದರೆ, ಅವರು ಈ ಚುನಾವಣೆಯಲ್ಲಿ ತಮ್ಮನ್ನು ''ರಾಜಕೀಯ ಆಟಗಾರರು" ಅಂತ ಭಾವಿಸಿದ್ದಾರೆ ಎಂದು ಜೈಶಂಕರ್ ಹೇಳಿದರು.


''ಭಾರತದ ಚುನಾವಣೆ ಕುರಿತು ಪಾಶ್ಚಿಮಾತ್ಯ ಮಾಧ್ಯಮಗಳು ಮಾಡಿದ ಟೀಕೆಗಳು ಮತ್ತು ವರದಿಗಳ ವಿರುದ್ಧ ನಿಲ್ಲುವ ಅಗತ್ಯವಿದೆ. ಈ ಪರಿಸ್ಥಿತಿಯಲ್ಲಿ ನಾವು ಆತ್ಮವಿಶ್ವಾಸದ ಮಾರ್ಗದಿಂದ ಟೀಕೆಗಳನ್ನು ಎದುರಿಸಿ ನಿಲ್ಲಬೇಕಾಗುತ್ತದೆ. ಇಲ್ಲದಿದ್ದರೆ, ಅವರು ನಮ್ಮ ದೇಶದಲ್ಲಿನ ಎಲ್ಲ ವಿಚಾರಗಳನ್ನು ಪ್ರಶ್ನಿಸುತ್ತಾರೆ. ಅವರು ನಮ್ಮ ಚುನಾವಣಾ ವ್ಯವಸ್ಥೆ, ನಮ್ಮ ಇವಿಎಂ, ನಮ್ಮ ಚುನಾವಣಾ ಆಯೋಗ, ಹವಾಮಾನವನ್ನು ಸಹ ಪ್ರಶ್ನಿಸುತ್ತಾರೆ'' ಎಂದು ಕಿಡಿಕಾರಿದ್ದಾರೆ.


''ನಾವು ಕಳೆದ ಹತ್ತು ವರ್ಷಗಳಿಂದ ಏನು ನೀಡಿದ್ದೇವೆ ಎಂಬುದರ ಆಧಾರದ ಮೇಲೆ ವಿಶ್ವಾಸದ ಅಭಿವ್ಯಕ್ತಿ ಸ್ಪಷ್ಟವಾಗಿದೆ. ಒಂದು ರೀತಿಯಲ್ಲಿ, ಇಂದು ನಾವು ಬಹಳ ಮುಖ್ಯವಾದ ಬದಲಾವಣೆಯ ಹಂತದಲ್ಲಿದ್ದೇವೆ. ಸರ್ಕಾರ ತೆಗೆದುಕೊಳ್ಳಲಿರುವ ನಿರ್ಧಾರಗಳು ಮುಂದಿನ ಐದು ವರ್ಷಗಳಿಗೆ ಮಾತ್ರವಲ್ಲ, ಬದಲಿಗೆ ನಮ್ಮ ದೇಶ, ನಮ್ಮ ಸಮಾಜ ಮತ್ತು ನಮ್ಮ ಮುಂದಿನ ಪೀಳಿಗೆಗೆ ದೊಡ್ಡ ವಿಶ್ವಾಸ ನೀಡುತ್ತದೆ. ಅದುವೇ ಗ್ಯಾರಂಟಿ ವಿಶ್ವಾಸದ ಅಭಿವ್ಯಕ್ತಿಯಾಗಿದೆ'' ಎಂದು ಜೈಶಂಕರ್ ತಿಳಿಸಿದರು. ಕಳೆದ ಹತ್ತು ವರ್ಷಗಳಲ್ಲಿ ಭಾರತವನ್ನು ವಿಶ್ವದಾದ್ಯಂತ ಹೇಗೆ ಪರಿಗಣಿಸಲಾಗಿದೆ. ಮುಂದಿನ 25 ವರ್ಷಗಳಲ್ಲಿ ದೇಶವು ಹೇಗೆ ತಯಾರಿ ನಡೆಸುತ್ತಿದೆ ಎಂಬುದು ಇಂದು ನಾವು ಜಗತ್ತಿಗೆ ಎತ್ತಿ ತೋರಿಸಬೇಕಿದೆ'' ಎಂದರು.


ನರೇಂದ್ರ ಮೋದಿ ಆಡಳಿತದಲ್ಲಿ ಕೆಲವು ಜಾಗತಿಕ ಮಾಧ್ಯಮಗಳು ಸುದ್ದಿಗಳನ್ನು ಪ್ರಸ್ತುತಪಡಿಸುವುದನ್ನು ಭಾರತ ಗಂಭೀರವಾಗಿ ಪರಿಗಣಿಸಿದೆ. ಪಾಶ್ಚಿಮಾತ್ಯ ಮಾಧ್ಯಮಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಕಳೆದ 10 ವರ್ಷಗಳ ಅವಧಿಯಲ್ಲಿ ಭಾರಿ ಜನಾದೇಶವನ್ನು ಪಡೆದ ಎನ್‌ಡಿಎ ಸರ್ಕಾರದ ವಿರುದ್ಧ ದೂರದೃಷ್ಟಿಯಿಲ್ಲದ ಟೀಕೆಗಳನ್ನು ಮಾಡಿವೆ ಎಂದು ಭಾರತ ಹೇಳಿದೆ.


"ಭಾರತದ ಪ್ರಜಾಪ್ರಭುತ್ವವನ್ನು ಜೀವಂತವಾಗಿಡುವಲ್ಲಿ ಮೋದಿಯವರ ಗ್ಯಾರಂಟಿ ಇಲ್ಲ" ಎಂದು ಈ ವಾರದ ಆರಂಭದಲ್ಲಿ ನ್ಯೂಯಾರ್ಕ್ ಮೂಲದ ಅಮೆರಿಕನ್ ಸುದ್ದಿ ಮಾಧ್ಯಮವೊಂದು ಪ್ರಕಟಿಸಿತ್ತು.


''ಪ್ರಗತಿಶೀಲ ದಕ್ಷಿಣವು ಮೋದಿಯನ್ನು ತಿರಸ್ಕರಿಸುತ್ತಿದೆ'' ಎಂಬ ಶೀರ್ಷಿಕೆಯ ಸುದ್ದಿಯನ್ನು ಭಾರತ ಟೀಕಿಸಿದೆ. ಈ ತಿಂಗಳ ಆರಂಭದಲ್ಲಿ, ನ್ಯೂಸ್‌ ವೀಕ್‌ಗೆ ನೀಡಿದ ಸಂದರ್ಶನದಲ್ಲಿ, ತಮ್ಮ ಸರ್ಕಾರವು ಧಾರ್ಮಿಕ ತಾರತಮ್ಯದಲ್ಲಿ ತೊಡಗಿದೆ ಎಂದು ಆರೋಪಿಸುವವರನ್ನು ಪ್ರಧಾನಿ ನರೇಂದ್ರ ಮೋದಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.


ಕಳೆದ ವರ್ಷ, ಅಪರೂಪದ ಪ್ರಶಂಸೆಯಲ್ಲಿ, ಚೀನಾ ಸರ್ಕಾರದ ಮುಖವಾಣಿ ಗ್ಲೋಬಲ್ ಟೈಮ್ಸ್, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಆರ್ಥಿಕ ಅಭಿವೃದ್ಧಿ, ಸಾಮಾಜಿಕ ಆಡಳಿತ ಮತ್ತು ವಿದೇಶಾಂಗ ನೀತಿಯಲ್ಲಿ ಭಾರತದ ಮಹತ್ವದ ಪ್ರಗತಿಯನ್ನು ಶ್ಲಾಘಿಸುವ ಲೇಖನವನ್ನು ಪ್ರಕಟಿಸಿತ್ತು.


ಶಾಂಘೈನ ಫುಡಾನ್ ವಿಶ್ವವಿದ್ಯಾನಿಲಯದ ದಕ್ಷಿಣ ಏಷ್ಯಾದ ಅಧ್ಯಯನಗಳ ಕೇಂದ್ರದ ನಿರ್ದೇಶಕರಾದ ಜಾಂಗ್ ಜಿಯಾಡಾಂಗ್ ಅವರು ಬರೆದ ಲೇಖನದಲ್ಲಿ, ''ಭಾರತದ ದೃಢವಾದ ಆರ್ಥಿಕ ಬೆಳವಣಿಗೆ, ನಗರ ಆಡಳಿತದಲ್ಲಿನ ಸುಧಾರಣೆಗಳು ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ಕಡೆಗೆ, ವಿಶೇಷವಾಗಿ ಚೀನಾದೊಂದಿಗಿನ ವರ್ತನೆಯ ಬದಲಾವಣೆಯನ್ನು ಒಪ್ಪಿಕೊಂಡಿದೆ'' ಎಂಬ ವಿಷಯಗಳನ್ನು ಪ್ರಾಸ್ತಾಪಿಸಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ