Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಗಾರದಲ್ಲಿ ಕಾಂಗ್ರೆಸ್ ಸಮಾವೇಶ; ಬೃಹತ್ ಟೆಂಟ್, ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ


ಕಾಗವಾಡ29: ನಾಳೆ ಉಗಾರ ಖುರ್ದನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಕಾಗವಾಡ, ರಾಯಬಾಗ, ಕುಡಚಿ, ಅಥಣಿ ಮತಕ್ಷೇತ್ರದ ಕಾರ್ಯಕರ್ತರು ಪಾಲ್ಗೊಳ್ಳತ್ತಿದ್ದು, ಸಿಎಂ ಸಿದ್ದರಾಮಯ್ಯನವರು ಆಗಮಿಸುತ್ತಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.


ಕಾಗವಾಡ ತಾಲೂಕಿನ ಉಗಾರ ಖುರ್ದನ ಶ್ರೀ ಹರಿ ಮಹಾವಿದ್ಯಾಲಯ ಆವರಣದಲ್ಲಿ ನಿರ್ಮಿಸಿದ ಬೃಹತ್ ಟೆಂಟ್, ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.


ನಾಳೆ ಐತಿಹಾಸಿಕ ಕಾರ್ಯಕ್ರಮ ಉಗಾರದಲ್ಲಿ ನಡೆಯುತ್ತಿದ್ದೆ ಎಂದ ಸಚಿವರು, ನಾವು ಕಳೆದ 30 ವರ್ಷಗಳಿಂದ ಮಾಡಿದ ಅಭಿವೃದ್ಧಿ ಕೆಲಸಗಳನ್ನೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು.


ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು  ಕಂಡಿತವಾಗಿ ಪರಿಣಾಮ ಬೀರುತ್ತವೆ. ಅದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದರು.


ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ 18 ಜನ ಸ್ಪರ್ಧೆಯಲ್ಲಿ ಇದ್ದಾರೆ. ಅದರಲ್ಲಿ ಎರಡು ಜನ ಮಾತ್ರ ರಾಷ್ಟ್ರೀಯ ಪಕ್ಷಗಳಿಂದ ಸ್ಪರ್ಧಿಸಿದ್ದಾರೆ. ಇನ್ನು ಸ್ವಾತಂತ್ರ್ಯ ಅಭ್ಯರ್ಥಿಗಳ ಸ್ಪರ್ಧೆ ಬಗ್ಗೆ ಚರ್ಚಿಸುವ ಅವಶಕತೆ ನಮಗಿಲ್ಲ ಎಂದರು.


ಹೆಲಿಪ್ಯಾಡ್ ಸ್ಥಳ ಪರಿಶೀಲನೆ:  ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆಯಲ್ಲಿ ಮಂಗಸೂಳಿ ಲಕ್ಷ್ಮೀ  ನಗರದಲ್ಲಿ ನಿರ್ಮಿಸಿದ ಹೆಲಿಪ್ಯಾಡ್ ಅನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಪರಿಶೀಲಿಸಿದರು.


ಈ ಸಂದರ್ಭದಲ್ಲಿ ಶಾಸಕ ರಾಜು ಕಾಗೆ, ಕಾಂಗ್ರೆಸ್ ಮುಖಂಡರಾದ ರಮೇಶ ಸಿಂದಗಿ, ಅಬಿಬ್ ಶಿಲ್ಲೇದಾರ್, ದಿಗ್ವಿಜಯ ಪವಾರ್, ರಾವಸಾಬ್ ಐಹೊಳೆ ಸೇರಿದಂತೆ ಹಲವರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ