Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಿಎಂ ಎಸ್ ಬಂಗಾರಪ್ಪನವರ ಕುರಿತು ಮನದಾಳ ಮಾತು ಬಿಚ್ಚಿಟ್ಟ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ನನ್ನ ಜೀವನದ ಆದರ್ಶ ವ್ಯಕ್ತಿ ಎಂದು ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಎಸ್ ಬಂಗಾರಪ್ಪನವರ ಕುರಿತು ಮನದಾಳದ ಮಾತು ಬಿಚ್ಚಿಟ್ಟರು.


ಹೌದು... ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ʻನಮ್ಮ‌ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತಂದೆಯವರ ಜೊತೆ ನಾನು ಕೂಡಾ ರಾಜಕೀಯ ಪ್ರಾರಂಭ ಮಾಡಿದೇವು. ಆಗ ನಮಗೂ ಕೂಡಾ  ಎಸ್ ಬಂಗಾರಪ್ಪ ಅವರನ್ನು ನೋಡಬೇಕೆಂಬ ಕಾತುರ ಹೆಚ್ಚಾಗಿತ್ತು. ಅವರ ಡ್ರಸ್‌, ಅವರ ಕನ್ನಡಕ ಅವರ ಲೈಫ್‌ ಸ್ಟೈಟ್‌ ನೋಡವುದೇ ಒಂದು ಚೆಂದ ಎಂದು ಮಾಜಿ ಸಿಎಂ ದಿ. ಎಸ್ ಬಂಗಾರಪ್ಪನವರ ಕುರಿತು ಸಚಿವರು ತಮ್ಮದೆಯಾದ ದಾಟಿ ಮೂಲಕ ಹೊಗಳಿದರು.


ಕಲರ್ ಪುಲ್ ರಾಜಕಾರಣ, ಧೈರ್ಯಕ್ಕೆ ಎಸ್ ಬಂಗಾರಪ್ಪನವರಿಗೆ  ಎಸ್ ಬಂಗಾರಪ್ಪನವರೇ ಸಾಟಿ.  ನಾವು ರಾಜಕಾರಣಕ್ಕೆ ಕಾಲಿಟ್ಟಾಗ  ಎಸ್ ಬಂಗಾರಪ್ಪ ಅವರು ಕಲರ್ ಫುಲ್‌ ರಾಜಕಾರಣಿಯಾಗಿದ್ದರು. ನಾವು ಕೂಡಾ ಅವರ ತೋಟದ ಮನೆ ಕುಬಟೂರಿಗೆ ಹೋಗುತ್ತಿದ್ದೇವು. ಅಲ್ಲದೇ ರಾಜ್ಯದ ಅಭಿವೃದ್ಧಿಗೆ ಎಸ್.ಬಂಗಾರಪ್ಪ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.


ದಿ. ಎಸ್ ಬಂಗಾರಪ್ಪನವರು ನನ್ನ ಜೀವನದ ಆದರ್ಶ ವ್ಯಕ್ತಿ:  ಮಾಜಿ ಸಿಎಂ ಎಸ್‌ ಬಂಗರಪ್ಪನವರು ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡದೇ  ಗೆಲುವು ಸಾಧಿಸುತ್ತಿದ್ದರು. ನಾವು ಕೂಡಾ ಅವರನ್ನೇ ಆದರ್ಶವಾಗಿಟ್ಟುಕೊಂಡು ಅವರಂತೆ ಗೆಲ್ಲಬೇಕೆಂದು 2018ರ ಚುನಾವಣೆಯಲ್ಲಿ ಪ್ರಚಾರಕ್ಕೆ ಹೋಗದೇ  ನಾನು ಕೂಡಾ ಚುನಾವಾಣೆಯಲ್ಲಿ ಗೆಲುವು ಸಾಧಿಸಿದೆ. ಅದರಂತೆ ಆಹಾರ ಪದ್ದತಿಯನ್ನು ಸಹ ಅವರಂತೆ ನನ್ನ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಹೇಳುವ ಮೂಲಕ ಎಸ್ ಬಂಗಾರಪ್ಪನವರ ಕುರಿತು ಮನದಾಳದ ಮಾತು ಬಿಚ್ಚಿಟ್ಟರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ