LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾಜಿ ಸಿಎಂ ಎಸ್ ಬಂಗಾರಪ್ಪನವರ ಕುರಿತು ಮನದಾಳ ಮಾತು ಬಿಚ್ಚಿಟ್ಟ ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ನನ್ನ ಜೀವನದ ಆದರ್ಶ ವ್ಯಕ್ತಿ ಎಂದು ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಎಸ್ ಬಂಗಾರಪ್ಪನವರ ಕುರಿತು ಮನದಾಳದ ಮಾತು ಬಿಚ್ಚಿಟ್ಟರು.


ಹೌದು... ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಬುಧವಾರ ಜರುಗಿದ ʻನಮ್ಮ‌ ಶಾಲೆ ನಮ್ಮ ಜವಾಬ್ದಾರಿʼ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತಂದೆಯವರ ಜೊತೆ ನಾನು ಕೂಡಾ ರಾಜಕೀಯ ಪ್ರಾರಂಭ ಮಾಡಿದೇವು. ಆಗ ನಮಗೂ ಕೂಡಾ  ಎಸ್ ಬಂಗಾರಪ್ಪ ಅವರನ್ನು ನೋಡಬೇಕೆಂಬ ಕಾತುರ ಹೆಚ್ಚಾಗಿತ್ತು. ಅವರ ಡ್ರಸ್‌, ಅವರ ಕನ್ನಡಕ ಅವರ ಲೈಫ್‌ ಸ್ಟೈಟ್‌ ನೋಡವುದೇ ಒಂದು ಚೆಂದ ಎಂದು ಮಾಜಿ ಸಿಎಂ ದಿ. ಎಸ್ ಬಂಗಾರಪ್ಪನವರ ಕುರಿತು ಸಚಿವರು ತಮ್ಮದೆಯಾದ ದಾಟಿ ಮೂಲಕ ಹೊಗಳಿದರು.


ಕಲರ್ ಪುಲ್ ರಾಜಕಾರಣ, ಧೈರ್ಯಕ್ಕೆ ಎಸ್ ಬಂಗಾರಪ್ಪನವರಿಗೆ  ಎಸ್ ಬಂಗಾರಪ್ಪನವರೇ ಸಾಟಿ.  ನಾವು ರಾಜಕಾರಣಕ್ಕೆ ಕಾಲಿಟ್ಟಾಗ  ಎಸ್ ಬಂಗಾರಪ್ಪ ಅವರು ಕಲರ್ ಫುಲ್‌ ರಾಜಕಾರಣಿಯಾಗಿದ್ದರು. ನಾವು ಕೂಡಾ ಅವರ ತೋಟದ ಮನೆ ಕುಬಟೂರಿಗೆ ಹೋಗುತ್ತಿದ್ದೇವು. ಅಲ್ಲದೇ ರಾಜ್ಯದ ಅಭಿವೃದ್ಧಿಗೆ ಎಸ್.ಬಂಗಾರಪ್ಪ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.


ದಿ. ಎಸ್ ಬಂಗಾರಪ್ಪನವರು ನನ್ನ ಜೀವನದ ಆದರ್ಶ ವ್ಯಕ್ತಿ:  ಮಾಜಿ ಸಿಎಂ ಎಸ್‌ ಬಂಗರಪ್ಪನವರು ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡದೇ  ಗೆಲುವು ಸಾಧಿಸುತ್ತಿದ್ದರು. ನಾವು ಕೂಡಾ ಅವರನ್ನೇ ಆದರ್ಶವಾಗಿಟ್ಟುಕೊಂಡು ಅವರಂತೆ ಗೆಲ್ಲಬೇಕೆಂದು 2018ರ ಚುನಾವಣೆಯಲ್ಲಿ ಪ್ರಚಾರಕ್ಕೆ ಹೋಗದೇ  ನಾನು ಕೂಡಾ ಚುನಾವಾಣೆಯಲ್ಲಿ ಗೆಲುವು ಸಾಧಿಸಿದೆ. ಅದರಂತೆ ಆಹಾರ ಪದ್ದತಿಯನ್ನು ಸಹ ಅವರಂತೆ ನನ್ನ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಹೇಳುವ ಮೂಲಕ ಎಸ್ ಬಂಗಾರಪ್ಪನವರ ಕುರಿತು ಮನದಾಳದ ಮಾತು ಬಿಚ್ಚಿಟ್ಟರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್