Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶೀಘ್ರವೇ ಲೋಳಸೂರು ಬಳಿ ಹೊಸ ಸೇತುವೆ ನಿರ್ಮಾಣ: ಸಚಿವ ಸತೀಶ್‌ ಜಾರಕಿಹೊಳಿ


ಗೋಕಾಕ : ಪಟ್ಟಣದ ಪ್ರವಾಹ ಪೀಡಿತ ಪ್ರದೇಶ ಪರಿಶೀಲಿನೆ-ಪ್ರವಾಸಿ ತಾಣ ಯೋಗಿಕೊಳ್ಳಕ್ಕೂ ಭೇಟಿ ನೀಡಿದ ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ: ಘಟಪ್ರಭಾ ನದಿ ಆರ್ಭಟಕ್ಕೆ ಗೋಕಾಕ್ ಜನತೆ ತತ್ತರಿಸಿದ್ದು, ಇಂದು ಬೆಳ್ಳಂಬೆಳಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಲೋಳಸೂರು ಸೇತುವೆ ಸೇರಿದಂತೆ ಪಟ್ಟಣದ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.


ಪಟ್ಟಣದ ಮಟನ್‌ ಮಾರುಕಟ್ಟೆ, ಕುಂಬಾರ ಗಲ್ಲಿ, ಹಳೆ ದನಗಳ ಮಾರುಕಟ್ಟೆಯಲ್ಲಿ ಪ್ರವಾಹದಿಂದ ಉಂಟಾದ ಅವಾಂತರಗಳ ಬಗ್ಗೆ ಮಾಹಿತಿ ಪಡೆದು, ಪಟ್ಟಣದ ಹೊರವಲಯದಲ್ಲಿರುವ ಲೋಳಸೂರು ಸೇತುವೆಯ ಸ್ಥಿತಿಗತಿ ಅವಲೋಕಿಸಿದರು.


ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲೋಳಸೂರು ಬಳಿ ಹೊಸ ಸೇತುವೆ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದ್ದು, ಶೀಘ್ರವೇ ಎಸ್ಟಿಮೇಂಟ್‌ ಮಾಡಿ ಟೆಂಡರ್ ಕರೆಯುತ್ತೇವೆ. ಆದರೆ ನೂತನ ಸೇತುವೆ ನಿರ್ಮಾಣಕ್ಕೆ ಎರಡು ವರ್ಷ ಅವಧಿ ಬೇಕಾಗುತ್ತದೆ ಎಂದು ತಿಳಿಸಿದರು.


ಲೋಳಸೂರು ಸೇತುವೆ ಮುಳುಗಡೆಯಾಗಿ ಸಾರ್ವಜನಿಕರು ಸೇರಿದಂತೆ ವಿದ್ಯಾರ್ಥಿಗಳಿಗೆ ತೊಂದರೆ ಆಗಿತ್ತು. ಈಗ ನೀರಿನ ಮಟ್ಟ ಕಡಿಮೆಯಾಗಿದೆ. ವಿದ್ಯಾರ್ಥಿಗಳ ಅನುಕೂಲ ದೃಷ್ಟಿಯಿಂದ ಅಧಿಕಾರಿಗಳಿಗೆ ಲೋಳಸೂರು ಸೇತುವೆಯನ್ನು ಶೀಘ್ರವೇ ಪರಿಶೀಲಿಸಿ ತಾತ್ಕಾಲಿಕ ಬಸ್ ಸಂಚಾರ ಆರಂಭಿಸುವಂತೆ ಸೂಚನೆ ನೀಡಿದ್ದೇನೆ ಎಂದರು.


ನಂತರ ನೂತನವಾಗಿ ನಿರ್ಮಿಸಿರುವ ಗೋಕಾಕ-ಶಿಂಗಳಾಪುರ ಸೇತುವೆಗೂ ಭೇಟಿ ಪರಿಶೀಲನೆ ನಡೆಸಿದ ಸಚಿವ ಸತೀಶ್‌ ಜಾರಕಿಹೊಳಿ ಅವರು, ಗೋಕಾಕ ಪಟ್ಟಣದ ಹೊರ ವಲಯದ ಮಾರ್ಕಂಡೇಯ ನದಿ ಪಕ್ಕದಲ್ಲಿರುವ ಪ್ರವಾಸಿ ತಾಣ ಯೋಗಿಕೊಳ್ಳಕ್ಕೂ ಭೇಟಿ ನೀಡಿದರು.


ಬೆಳ್ಳಂಬೆಳಗ್ಗೆಯೇ ಪ್ರವಾಹ ಪೀಡಿತ ಪ್ರದೇಶ ವೀಕ್ಷಿಸಲು ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರನ್ನು ಕಂಡ ಗೋಕಾಕ ಪಟ್ಟಣದ ಜನತೆ ಖುಷಿ ವ್ಯಕ್ತಪಡಿಸಿ, ತಮ್ಮ ಸಮಸ್ಯೆಗಳನ್ನು ಸಚಿವರ ಬಳಿ ತೊಡಿಕೊಂಡರು. ಇದೇ ವೇಳೆ ಜನತೆ ಮನವಿಗೆ ಸ್ಪಂದಿಸಿದ ಸಚಿವ ಸತೀಶ್‌ ಜಾರಕಿಹೊಳಿ, ತಮ್ಮ ಸಮಸ್ಯೆಗಳನ್ನು ನಿವಾರಿಸುವ ಕೆಲಸ ಮಾಡುತ್ತೇನೆ. ಪ್ರವಾಹದಿಂದ ಯಾರು ಭಯಭೀತರಾಗಬೇಡಿ ಎಂದು ಸಾರ್ವಜನಿಕರಿಗೆ ಧೈರ್ಯ ತುಂಬಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ