Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಅಸಮಾಧಾನ

ಬೆಳಗಾವಿ, ಜೂನ್ 7: ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್  ಅಭ್ಯರ್ಥಿಗೆ ಗೆಲುವಾದರೂ ಪಕ್ಷದ ಒಳಬೇಗುದಿ ಹೆಚ್ಚಾಗಿದೆ. ಇದೀಗ ಶಾಸಕ ಲಕ್ಷ್ಮಣ್  ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ  ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ಬಿಜೆಪಿಯಿಂದ ಪಕ್ಷಕ್ಕೆ ಬಂದವರಿಂದ ಕೊನೆಯ ವರೆಗೂ ಸಮಸ್ಯೆಯಾಯಿತು ಎಂದಿದ್ದಾರೆ.

ಅಥಣಿಯಲ್ಲಿ ಮಾತನಾಡಿದ ಅವರು, ಈಗ ಕಾಂಗ್ರೆಸ್​ಗೆ ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಮುಖಂಡರು ಬದಲಾದರೂ ಕಾರ್ಯಕರ್ತರು ಬದಲಾಗಲಿಲ್ಲ. ಅಥಣಿಯಲ್ಲಿ 20-30 ಸಾವಿರ ಲೀಡ್ ಸಿಗುತ್ತೆ ಅಂದುಕೊಂಡಿದ್ದೆವು. ಆದರೆ ಏನೋ ಮಾಡಲು ಹೋಗಿ ಇನ್ನೇನೋ ಆಯಿತು ಎಂದು ಹೇಳಿದ್ದಾರೆ.

ಅವರು ಏಕೆ ಹಾಗೆ ಮಾಡಿದರು, ಅವರ ಪ್ಲ್ಯಾನ್ ಏನಿತ್ತು ನೋಡೋಣ. ಅವರು ಸೀರಿಯಲ್​ನಲ್ಲಿ ಬರುವಂತೆ ನಿಧಾನ ಆಗುತ್ತಾ ಹೋದರು. ಸರಿಯಾಗಿ ಪ್ರಚಾರ ಮಾಡಲಿಲ್ಲ, ಇದನ್ನು ನಾವು ನೋಡಿದ್ದೇವೆ. ವಿಶ್ವಾಸ ಇಟ್ಟು ಕೊಟ್ಟಿದ್ದೆವು, ಬಹಳ ನಂಬಿದ್ದೆವು. ಆದರೆ ಬಹಳ ಮೋಸ ಮಾಡಿದ್ದಾರೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮಗೆ ಹತ್ತಿರ ಬರಲು ಅವರಿಗೆ ಒಳ್ಳೆಯ ಅವಕಾಶ ಇತ್ತು. ಆದರೆ, ಬಿಜೆಪಿಯಿಂದ ಪಕ್ಷಕ್ಕೆ ಬಂದವರು ಕೊನೆಯವರೆಗೆ ಸಮಸ್ಯೆ ಮಾಡಿದರು ಎಂದು ಲಕ್ಷ್ಮಣ್ ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ