Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಪ್ಪರಗಿ ಬ್ಯಾರೇಜ್‌ನ ಗೇಟ್ ಅಳವಡಿಕೆಗೆ ಕ್ರಮ- ಸಚಿವ ತಿಮ್ಮಾಪೂರ



ಜಮಖಂಡಿ; ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ನ 22 ನೇ ಗೇಟ್‌ ನೀರಿನ ರಭಸಕ್ಕೆ ಕಿತ್ತು ಹೋಗಿದೆ. ಕೂಡಲೇ ಗೇಟ್‌ ಅಳವಡಿಸಲು ಕ್ರಮ ಜರುಗಿಸಲಾಗುತ್ತದೆ. ರೈತರು ಆತಂಕ ಪಡಬೇಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ.ತಿಮ್ಮಾಪೂರ ತಿಳಿಸಿದರು. ಮಗಳವಾರ ಮಧ್ಯಾನ 1 ಗಂಟೆಯ ಸುಮಾರಿಗೆ ಹಿಪ್ಪರಗಿ ಬ್ಯಾರೇಜ್‌ನ ಗೆಟ್‌ ಕಳಚಿರುವ ಸುದ್ದಿ ತಿಳಿದಾಕ್ಷಣ ಜಿಲ್ಲಾಧಿಕಾರಿಗಳ ತಂಡ ದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು. ಗೇಟ್‌ನ ಅಳವಡಿಕೆಗೆ ಆಂಧ್ರಪ್ರದೇಶದ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿದೆ ಸುಮಾರು 3 ರಿಂದ ನಾಲ್ಕು ಗಂಟೆಗಳಲ್ಲಿ ನೂತನ ಗೇಟ್‌ ಅಳವಡಿಸುತ್ತೇವೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.



ಅಷ್ಟರಲ್ಲಿ 0.65 ಅಥವಾ0.75 ಟಿಎಂಸಿ ಅಷ್ಟು ನೀರು ನದಿಪಾತ್ರಕ್ಕೆ ಹರಿದು ಹೋಗಲಿದೆ. ಸುಮಾರು 5 ಸಾವಿರ ಕ್ಯೂಸೆಕ್‌ ನೀರು ಹರಿಯುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ರೈತರು ಆತಂಕ ಪಡಬೇಕಾದ ಸ್ಥಿತಿ ಇಲ್ಲ. ಮುಖ್ಯ ಇಂಜನೀಯರ್‌ಗಳು, ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದರು. ಗೇಟ್‌ ಕಳಚಿದೆ ಎಂಬ ಸುದ್ದಿ ಕೇಳಿ ಆತಂಕ ಉಂಟಾಗಿತ್ತು. ಬಹಳಷ್ಟು ಪ್ರಮಾಣದಲ್ಲಿ ನೀರು ಹರಿದು ಹೋದರೆ ಜಲಾಶಯದ ಹಿಂಬಾಗದ ಗ್ರಾಮಗಳ ರೈತರಿಗೆ ತೊಂದರೆ ಆಗಬಹುದು ಎಂಬ ಆತಂಕ ವಿತ್ತು ಆದರೆ ಅಂದು ಕೊಂಡಷ್ಟು ನೀರು ಹರಿದು ಹೋಗುವದಿಲ್ಲ ಎಂದು ತಜ್ಞರು ತಿಳಿಸಿದ್ದಾರೆ ಸುಮಾರು 5 ಸಾವಿರ ಕ್ಯೂಸೆಕ್‌ ನೀರು ಹರಿದು ಹೋಗಲಿದೆ ಎಂದು ಹೇಳಿರುವದರಿಂದ ರೈತರು ಆತಂಕ ಪಡಬೇಕಿಲ್ಲ ಎಂದು ತಿಳಿಸಿದರು. ಅಧಿಕಾರಿಗಳಿಗೆ ಆದಷ್ಟು ಬೇಗನೇ ಗೇಟ್‌ ಅಳವಡಿಸುವಂತೆ ಆದೇಶ ನೀಡಿದ್ದೇನೆ ಎಂದು ತಿಳಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ