LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿ ನಾಗೇಂದ್ರ ಅವರಿಗೆ ಸಚಿವ ಸ್ಥಾನ ; ಮಾಜಿ ಸಚಿವ ಬಿ  ಶ್ರೀರಾಮುಲು ಅಸಮಾಧಾನ 

ಬಳ್ಳಾರಿ, ಆ.10:: ಕಾಂಗ್ರೆಸ್‌ ಪಕ್ಷವು ಇಂದಿರಾ ಗಾಂಧಿ ಅವರ ಕಾಲದಲ್ಲಿ ವಿಮಾನದ ವೇಗದಲ್ಲಿ ಬೆಳೆಯುತ್ತಿತ್ತು. ಆದರೆ ಇಂದು ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದಿಂದಾಗಿ ಅದರ ವೇಗ ಎತ್ತಿನಗಾಡಿಯಂತಾಗಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ರಾಜ್ಯದಲ್ಲಿನ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಟೀಕಿಸಿದರು.
ನಗರದ ತಮ್ಮ ಗೃಹ ಕಚೇರಿಯಲ್ಲಿ  ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶ್ರೀರಾಮುಲು , ಕಾಂಗ್ರೆಸ್‌ ಪಕ್ಷದವರು ಮೂರು ತಲೆಮಾರುಗಳಿಗೆ ಆಗುವಷ್ಟು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದ ಶ್ರೀರಾಮುಲು, 1948ರಲ್ಲಿ ಜವಾಹರಲಾಲ್ ನೆಹರು ಅವರ ಕಾಲದಲ್ಲಿ ನಡೆದ ಜೀಪ್ ಹಗರಣ ದೇಶದಲ್ಲಿ ನಡೆದ ಪ್ರಮುಖ ಹಗರಣಗಳಲ್ಲಿ ಒಂದಾಗಿದೆ ಎಂದು ಹೇಳಿದರು.
 ನೆಹರು ಮತ್ತು ಇಂದಿರಾ ಗಾಂಧಿ ಅವರ ಕಾಲದ ವಿಚಾರಗಳನ್ನು ಪ್ರಸ್ತಾಪಿಸಲು ಕಾರಣವಿದೆ. ಇಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸಿ ಜೈಲಿಗೆ ಹೋಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಲಾಗಿದೆ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದರು.
ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಅವರು, ಈ ಪ್ರಕರಣದಲ್ಲಿ ಚಂದ್ರಶೇಖರ್ ಅವರ ಸಾವಿಗೂ ನಾಗೇಂದ್ರ ಅವರೇ ಕಾರಣ ಎಂಬ ಆರೋಪಿಸಿ ಈ ಘಟನೆಯಿಂದ ಚಂದ್ರಶೇಖರ್ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ ಎಂದರು.
 ಬೀದಿ ಬದಿ ವ್ಯಾಪಾರಿಗಳ ಬದುಕಿಗೆ ತೊಂದರೆ ಉಂಟಾಗಿದೆ ಎಂದು ಆರೋಪಿಸಿದ ಅವರು, "ಬೀದಿ ಬದಿ ವ್ಯಾಪಾರಿಗಳ ಜೀವನವನ್ನು ಬೀದಿಗೆ ತಂದಿರುವುದು ಸರಿಯೇ?" ಎಂದು ನಾಗೇಂದ್ರ ಅವರನ್ನು ಪ್ರಶ್ನಿಸಿದರು.
ನಾಗೇಂದ್ರ ಅವರ ವಿರುದ್ಧದ ಪ್ರಕರಣಗಳ ಹಿನ್ನೆಲೆಯಲ್ಲಿ ನ್ಯಾಯಾಲಯವು ದೇಶ ಬಿಟ್ಟು ಹೋಗದಂತೆ ಆದೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀರಾಮುಲು, ಮುಂದಿನ ದಿನಗಳಲ್ಲಿ ಬಳ್ಳಾರಿಗೆ ತೆರಳದಂತೆ ಆದೇಶ ಬಂದರೆ ಬಳ್ಳಾರಿ ಜನರ ಪರಿಸ್ಥಿತಿ ಏನಾಗಲಿದೆ ಎಂದು ಪ್ರಶ್ನಿಸಿದರು.
"ನಾಗೇಂದ್ರ ಅವರಿಗೆ ನಾಚಿಕೆ, ಮಾನ, ಮರ್ಯಾದೆ ಇದ್ದರೆ ಸ್ವಯಂಪ್ರೇರಿತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು" ಎಂದು ಅವರು ಆಗ್ರಹಿಸಿದರು.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಬೇಕು. ಅವರು ರಾಜೀನಾಮೆ ನೀಡುವವರೆಗೆ ವಿಧಾನಸಭೆ ಅಧಿವೇಶನ ಸುಗಮವಾಗಿ ನಡೆಯದಂತೆ ಹೋರಾಟ ನಡೆಸುವಂತೆ ಪಕ್ಷದ ನಾಯಕರಿಗೆ ಮನವಿ ಮಾಡುತ್ತೇನೆ ಎಂದರು.
ಇದೇ ವೇಳೆ, ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ  ವಾರಕ್ಕೊಮ್ಮೆ ಸಚಿವರನ್ನು ಬದಲಾಯಿಸುವಂತಹ ಪರಿಸ್ಥಿತಿ ನಿರ್ಮಾಣವಾದರೆ ಮಾತ್ರ ಕಾಂಗ್ರೆಸ್‌ನಲ್ಲಿನ ಬಂಡಾಯಕ್ಕೆ ಪರಿಹಾರ ಸಿಗಬಹುದು. ಸರ್ಕಾರದೊಳಗಿನ ಈ ಗೊಂದಲವನ್ನು ನೋಡುತ್ತಿದ್ದರೆ ಮುಖ್ಯಮಂತ್ರಿ ಕುರ್ಚಿಯೂ ಅಲುಗಾಡುವ ಸಾಧ್ಯತೆ ಕಾಣುತ್ತಿದೆ ಎಂದು ಶ್ರೀರಾಮುಲು ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಂಸದ ಸಣ್ಣ  ಫಕೀರಪ್ಪ, ಮಹಾನಗರ ಪಾಲಿಕೆ ಸದಸ್ಯರಾದ ಶ್ರೀನಿವಾಸ್ ಮೊತ್ಕಾರ್, ಹನುಮಂತಪ್ಪ, ಗುಡಿಗಂಟಿ ಹನುಮಂತ, ಕೆ.ಎಸ್. ಅಶೋಕ್, ಮುಖಂಡರಾದ ಓಬಳೇಶ್, ತಿಮ್ಮಪ್ಪ, ವೇಮಣ್ಣ, ಭೀಮಲಿಂಗ, ಸುಗುಣ ಸೇರಿದಂತೆ ಇತರರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುಪಿಐ ಬಳಕೆದಾರರಿಗೆ ಹೊಸ ಶುಲ್ಕವಿಲ್ಲ: ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗದ ನಡುವೆ ಪ್ರಮುಖ ಹಣಕಾಸು ಮಸೂದೆಗಳಿಗೆ ಅಂಗೀಕಾರಬೆಳಗಾವಿಯ 'ಪ್ರಯತ್ನ' ಸಂಘಟನೆಯಿಂದ ಖಾನಾಪುರದ ಸರ್ಕಾರಿ ಪಿಯು ಕಾಲೇಜಿಗೆ 39 ಡೆಸ್ಕ್ ದೇಣಿಗೆಹುಬ್ಬಳ್ಳಿ ಧಾರವಾಡ 74 ಪಶ್ಚಿಮ ವಿಧಾನ ಸಭಾ ಮತ ಕ್ಷೇತ್ರದ ವತಿಯಿಂದ ಸಂಘಟನ್ ಸೃಜನ ಅಭಿಯಾನ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ : ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ  ಚಂದ್ರಶೇಖರ ನುಗ್ಲಿ  ಭರವಸೆರಾಜ್ಯದ ರೈತರಿಗೆ ಕೂಡಲೇ ಬರ ಪರಿಹಾರ ಘೋಷಿಸಿ: ಎನ್. ರವಿಕುಮಾರ್.ಕಿತ್ತೂರು ಗತವೈಭವಕ್ಕೆ ಹೊಸ ಸ್ಪರ್ಶ: ಪರಂಪರೆ ಸಂರಕ್ಷಣೆಗೆ ತಜ್ಞರ ಮಹತ್ವದ ಸಲಹೆಗಳುಯುವಕರು ಆರೋಗ್ಯಯುತ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ಸರ್ವೋತ್ತಮ ಜಾರಕಿಹೊಳಿಪ್ರೌಢಶಾಲಾ ಮಕ್ಕಳಿಗಾಗಿ ಹಾಸ್ಯ ಭಾಷಣ ಸ್ಪರ್ಧೆ ಸ್ಪರ್ಧೆಗಳು ಮಕ್ಕಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುತ್ತವೆ : ಡಾ. ಅರವಿಂದ ಕುಲಕರ್ಣಿವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಸತಿ ನಿಲಯಗಳು ಪೂರಕವಾಗಲಿವಚನಾನುಸಂಧಾನ ವ್ಯಕ್ತಿತ್ವವನ್ನು ರೂಪಿಸುತ್ತದೆ : ತೋಂಟದ ಶ್ರೀ