Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಖಾಸ್ಗತ ಜಾತ್ರೋತ್ಸವದಲ್ಲಿ ಭಕ್ತರಿಗೆ ಮಿರ್ಚಿ ಬಜಿ ಪ್ರಸಾದ : ಜಿ.ಪಿ. ಘೋರ್ಪಡೆ

ಇಂದು ಬಜಿ-ಫಲಾವ್-ಶೆಂಗಾದ ಹೋಳಿಗೆ* ಗದ್ದಲ ವಾತಾವರಣ ತಡೆಯಲು ಸಿದ್ದತೆ

ತಾಳಿಕೋಟೆ, ಜು,೨೩ : ಐತಿಹಾಸಿಕ ಹಿನ್ನೇಲೆಹೊಂದಿರುವ ತಾಳಿಕೋಟೆ ನಗರಿ ಸದ್ಯ ಧಾರ್ಮಿಕ ಮತ್ತು ದಾಸೋಹ ಕ್ಷೇತ್ರದಲ್ಲಿಯೂ ಕೂಡಾ ರಾಜ್ಯದಲ್ಲಿ ಸದ್ದು ಮಾಡುತ್ತಿದ್ದು ಸದ್ಯ ಶ್ರೀ ಖಾಸ್ಗತೇಶ್ವರ ಜಾತ್ರೆ ನಡೆದಿರುವದರಿಂದ ನಿತ್ಯ ದಾಸೋಹದ ವಿವಿಧತೆ ಪ್ರಸಾದದಲ್ಲಿ ಈ ಭಾರಿ ಭಕ್ತರಿಗೆ ನಿತ್ಯ ಫಕ್ವಾನ ಭೋಜನದ ಪ್ರಸಾದದ ಜೊತೆಗೆ ಇಂದು ಮಿರ್ಚಿಬಜಿ  ಪ್ರಸಾದ ಸಿಗಲಿದೆ.
ರಾಜ್ಯದ ಧಾರ್ಮಿಕ ಕ್ಷೇತ್ರದ ಮಠಗಳಲ್ಲಿಯೇ ಅತ್ಯಂತ ಹೆಸರು ಮಾಡಿರುವ ತಾಳಿಕೋಟೆಯ ಶ್ರೀ ಖಾಸ್ಗತಮಠವು ಲಕ್ಷಾಂತರ ಭಕ್ತಸಮೂಹವನ್ನು ಹೊಂದಿದ ಮಠವಾಗಿದೆ ಶ್ರೀ ಖಾಸ್ಗತರ ಜಾತ್ರೆಗೆ ಈ ಭಾಗದಲ್ಲಿ ಅಜ್ಜನ ಜಾತ್ರೆ ಎಂದೇ ಅತ್ಯಂತ ಪ್ರಚಲಿತಹೊಂದಿರುವ ಶ್ರೀ ಖಾಸ್ಗತ ಮಠದಲ್ಲಿ ಜಾತ್ರಾ ನಿಮಿತ್ಯವಾಗಿ ಇಂದು ಮಿರ್ಚಿ ಬಜಿ-ಫಲಾವ್-ಶೇಂಗಾದ ಹೋಳಿಗೆ ಎಲ್ಲ ಭಕ್ತರಿಗೆ ಉಣಬಡಿಸುವಂತಹ ಕಾರ್ಯ ನಡೆಯಲಿದೆ.
ಹಿಂದಿನ ಪೀಠಾಧೀಪತಿ ಲಿಂ.ವಿರಕ್ತ ಮಹಾಸ್ವಾಮಿಗಳ ನುಡಿಯಂತೆ ಅವರ ಮೇಲೆ ಭಕ್ತರು ಇಟ್ಟಿದ್ದ ಭಕ್ತಿ, ಪ್ರೀತಿ, ವಾತ್ಸಲ್ಯ ಈಗಲೂ ಕೂಡಾ ಮಠದ ಮೇಲೆ ಭಕ್ತರು ತೋರಿಸುತ್ತಿದ್ದು ವಿರಕ್ತಶ್ರೀಗಳ ದಾರಿಯಲ್ಲಿ ಈಗೀನ ಶ್ರೀಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗದೇವರು ಕೂಡಾ ಭಕ್ತರೇ ಶ್ರೀಮಠದ ಆಸ್ತಿ ಎಂದು ಸಾರಿ ಸಾರಿ ಹೇಳುತ್ತಿದ್ದು ಇದರಿಂದ ಲಿಂ.ವಿರಕ್ತಶ್ರೀಗಳ ಮೇಲಿನ ಪ್ರೀತಿ ಇನ್ನಷ್ಟು ಇಮ್ಮಡಿಗೊಳಿಸುವಂತೆ ಮಾಡಿದೆ ಅಲ್ಲದೇ ಶ್ರೀ ಖಾಸ್ಗತಮಠದ ಮೇಲಿನ ಭಕ್ತಿ ನಂಬಿಕೆ ಇನ್ನಷ್ಟು ಹೆಚ್ಚಲು ಕಾರಣವಾಗಿದೆ.
ಮಿರ್ಚಿ ಬಜಿ-ಹೋಳಿಗೆ ಜಾತ್ರೆ ಶ್ರೀ ಖಾಸ್ಗತ ಮಠದ ಜಾತ್ರೋತ್ಸವದ ದಾಸೋಹ ವ್ಯವಸ್ಥೆಗೆ ಎಲ್ಲ ಗ್ರಾಮ ಪಟ್ಟಣಗಳಿಂದ ಅವಶ್ಯಕ ದವಸ ದಾನ್ಯಗಳಲ್ಲದೇ ರೋಟ್ಟಿ ಇನ್ನಿತರಗಳನ್ನು ಭಕ್ತಾಧಿಗಳು ಅರ್ಪಿಸುತ್ತಿದ್ದು ಅದರ ಜೊತಗೆ ಈ ಭಾರಿ ಪ್ರತಿ ಗ್ರಾಮಗಳಿಂದಲೂ ಕೂಡಾ ಭಕ್ತರೇ ಶೆಂಗಾ ಹೋಳಿಗೆಯನ್ನು ತಯಾರಿಸಿ ಅದರ ಜೊತೆಗೆ ತುಪ್ಪಾ ರೋಟ್ಟಿ ಕಟ್ಟಿದ ಬುತ್ತಿರೋಟ್ಟಿಯನ್ನು ತಲೆಯ ಮೇಲೆ ಹೊತ್ತುಕೊಂಡು ಪಾದಯಾತ್ರೆಯ ಮೂಲಕ ಶ್ರೀಮಠಕ್ಕೆ ಆಗಮಿಸಿ ಭಕ್ತರಿಗೆ ಉಣಬಡಿಸುವ ಕಾರ್ಯದಲ್ಲಿ ತೋಡಗಿರುವದು ಈ ಭಾರಿಯ ವಿಶೇಷವಾಗಿದೆ ಪ್ರತಿ ಗ್ರಾಮದಿಂದಲೂ ನಿತ್ಯ ೫ ಸಾವಿರಕ್ಕೂ ಅಧಿಕ ಶೆಂಗಾ ಹೋಳಿಗೆಗಳು ಆಗಮಿಸುತ್ತಿದ್ದು ಈ ಭಾರಿ ರೋಟ್ಟಿ ಜಾತ್ರೆಯ ಜೊತೆಗೆ ಹೋಳಿಗೆ ಜಾತ್ರೆ ಎಂದು ಕರೆಸಿಕೊಳ್ಳುತ್ತಿರುವದು ವಿಶೇಷವಾಗಿದೆ. ಇನ್ನೂ ಭಕ್ತಾಧಿಗಳು ನೀಡಿದ ದವಸ್ಯ ದಾನ್ಯಗಳಿಂದ ನಿತ್ಯ ವಿವಿಧ ರೀತಿಯ ಪ್ರಸಾದವನ್ನು ತಯಾರಿಸಿ ಭಕ್ತಾಧಿಗಳಿಗೆ ಯಾವುದೇ ರೀತಿಯ ಕೊರತೆ ಬಿಳ್ಳದ ಹಾಗೆ ಶ್ರೀಮಠದಿಂದ ನೋಡಿಕೊಳ್ಳಲಾಗುತ್ತಿದೆ.
 ಪ್ರತೀ ವರ್ಷದಂತೆ ಈ ಸಲುವೂ ಸಜ್ಜಕ ತುಪ್ಪದ ಊಟ ಭಕ್ತರಿಗೆ ಉಣಬಡಿಸಲಾಗಿದೆ ಅದರ ಜೊತೆಗೆ ಶ್ರೀಮಠದ ಬಾಲಶಿವಯೋಗಿ ಶ್ರೀಗಳ ಮಾತಿನಂತೆ ಮಿರ್ಚಿ ಬಜಿ-ಚೆಟ್ನಿ ಪ್ರಸಾದವನ್ನು ಭಕ್ತರಿಗೆ ಉಣಬಡಿಸುವ ಸಲುವಾಗಿ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ. ಪ್ರಸಾದ ಭಕ್ತಾಧಿಗಳಿಗೆ ಸವಿಯಲು ಮತ್ತು ಗದ್ದಲ ವಾತಾವರಣ ತಡೆಯಲು ಪೂರ್ವ ಸಿದ್ದತೆಯನ್ನು ಕೈಗೊಳ್ಳಲಾಗಿದೆ.
ಗೋಪಾಲ ಕಾವಲಿ ಒಡೆಯುವ ಕಾರ್ಯಕ್ರಮ ಶ್ರೀ ಖಾಸ್ಗತ ಮಹಾ ಶಿವಯೋಗಿಗಳ ಜಾತ್ರೆ ಹಾಗೂ ರಥೋತ್ಸವ ಅಂಗವಾಗಿ ದಿ. ೨೬ ರವಿವಾರರಂದು ನಸುಕಿನ ಜಾವ ೫-೩೦ ಕ್ಕೆ ಅಸಂಖ್ಯಾತ ಭಕ್ತ ಸಮೂಹದ ಸಮ್ಮುಖದಲ್ಲಿ ಗೋಪಾಲ ಕಾವಲಿ(ಮೊಸರು ಗಡಿಗೆ) ಒಡೆಯುವ ಕಾರ್ಯಕ್ರಮವು ಭಕ್ತಿ ಭಾವದೊಂದಿಗೆ ಜರುಗಲಿದೆ. ೯ ದಿನಗಳ ಕಾಲ ನಡೆದು ಬಂದ ಸಪ್ತ ಭಜನಾ ಕಾರ್ಯಕ್ರಮವು ಗೋಪಾಲಕಾವಲಿ(ಮೊಸರುಗಡಿಗೆ) ಒಡೆಯುವದರ ಮೂಲಕ ಮಂಗಲಗೊಳ್ಳಲಿದೆ. 
ಶ್ರೀಮಠದ ಬಾಲಶಿವಯೋಗಿ ಶ್ರೀ ಸಿದ್ದಲಿಂಗ ದೇವರು ಘನ ಅಧ್ಯಕ್ಷತೆಯಲ್ಲಿ ಜರುಗಲಿರುವ ಈ ಗೋಪಾಲ ಕಾವಲಿ ಒಡೆಯುವ ಮುಂಚೆ ಭವ್ಯ ಪ್ರಭಾತ ಪೇರಿಯೊಂದಿಗೆ ಧ್ವಜದ ಮೆರವಣಿಗೆ ನಡೆಯುವದು. "ಭಕ್ತರೇ ಶ್ರೀಮಠದ ಆಸ್ತಿ" ಎಂದು ನಾನು ಶ್ರೀ ಖಾಸ್ಗತರ ಹಾಗೂ ಶ್ರೀ ವಿರಕ್ತಶ್ರೀಗಳ ವಾಣಿಯಂತೆ ನಡೆದಿದ್ದೆನೆ ಈ ಭಾರಿಯ ಜಾತ್ರೆಯಲ್ಲಿ ವಿಶೇಷತೆಯೊಂದಿಗೆ ಭಕ್ತಾಧಿಗಳಿಗೆ ಮಿರ್ಚಿಬಜಿ ಶೆಂಗಾ ಹೋಳಿಗೆ, ಪ್ರಸಾದ ಭಕ್ತಾಧಿಗಳಿಗೆ ನೀಡಲಾಗುತ್ತಿದೆ ಎಲ್ಲ ಭಕ್ತರು ಪ್ರಸಾದ ಸ್ವಿಕರಿಸಿ ಶ್ರೀ ಖಾಸ್ಗತರ, ವಿರಕ್ತಶ್ರೀಗಳ ಕೃಪೆಗೆ ಪಾತ್ರರಾಗಬೇಕು.
                       
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಖಾಸ್ಗತನ ಮಿರ್ಚಿಬಜಿ-ಪಲಾವ್ ಪ್ರಸಾದ ಸವಿದ ಸದ್ಭಕ್ತರು"ರಾಷ್ಟ್ರಧ್ವಜವು ನಾಗರಿಕರ ದೇಶಭಕ್ತಿಯನ್ನು ಬಲಪಡಿಸುತ್ತದೆ"ಮಂದಿರ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ವೇಗ: ಗ್ರಾಮಸ್ಥರೊಂದಿಗೆ ಚರ್ಚಿಸಿದ ಚನ್ನರಾಜ ಹಟ್ಟಿಹೊಳಿ ದಕ ಮಾದರಿಯಲ್ಲಿ ಉಕ ದೇವಾಲಯಗಳ ಅಭಿವೃದ್ಧಿಪಡಿಸಿಶ್ರೀ ಸತ್ಯ ಸಾಯಿ ಬಾಲ ವಿಕಾಸ ತರಗತಿಗಳನ್ನು ಬೋಧಿಸಲು ಮನವಿಮಲೇರಿಯಾ, ಡೆಂಘೀ ಪ್ರಕರಣಗಳಿಗೆ ಅಗತ್ಯ ಕ್ರಮಕೈಗೊಳ್ಳಿವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ : ಆಕಾಶ ನಂದಗಾಂವನಾಳೆ ಸುರೇಬಾನ-ಮನಿಹಾಳ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಸಾಂಸ್ಕೃತಿಕ ಕ್ರೀಡೆ, ಇ ಎಲ್ ಸಿ. ರೇಂಜರ್ ಮತ್ತು ರೋವರ್ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭರೈತರಲ್ಲಿ ಪರ್ಯಾಯ ಬೆಳೆ ಬೆಳೆಯಲು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳದೆಹಲಿ ಪೊಲೀಸರು ಪ್ರತಿಭಟನೆ ನಿರತ ವಿದ್ಯಾರ್ಥಿ ಗಳ ಮೇಲೆ   ಶಾಕ್ ಬಟನ್, ಪೆಲ್ಲೆಟ್ ಗನ್ ಬಳಸಿ ದೌರ್ಜನ್ಯ:   ಕ್ರಮ ವಿರುದ್ಧ ಹೊಸಪೇಟೆಯಲ್ಲಿ ಎಐಡಿಎಸ್‌ಒ ಆಕ್ರೋಶ*