Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹರ್ಷಿ ಭಗೀರಥರ ಛಲ, ದೃಢಸಂಕಲ್ಪದ ಪ್ರತೀಕವಾಗಿದ್ದಾರೆ : ಶಾಸಕ ಅರವಿಂದ ಬೆಲ್ಲದ



ಧಾರವಾಡ : ಛಲ, ದೃಢಸಂಕಲ್ಪದ ಪ್ರತೀಕ ಭಗೀರಥ. ತಮ್ಮ ಸಾಧನೆಯ ಮೂಲಕ ಗಂಗಾ ನದಿಯ ದಿಕ್ಕನ್ನು ಬದಲಿಸಿ ಜನರಿಗೆ ಸಾಧನೆಯ ದಾರಿಯನ್ನು ತೋರಿಸಿಕೊಟ್ಟವರು, ಅಂಥವರ ಜಯಂತಿ ಆಚರಿಸುತ್ತಿರುವುದು ನಮ್ಮ ಪುಣ್ಯ ಎಂದು ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಹೇಳಿದರು.


  ನಗರದ ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಮಹರ್ಷಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.


 ಗಂಗಾ ನದಿಯ ದಿಕ್ಕನ್ನೆ ಬದಲಿಸಿದ ಮಹಾನ್ ವ್ಯಕ್ತಿ ಮಹರ್ಷಿ ಭಗೀರಥರು. ತಮ್ಮ ಸಾಧನೆಯ ಮೂಲಕ ಎಲ್ಲ ಮನಕುಲಕ್ಕೆ ಸಹಾಯ ಮಾಡಿದ್ದಾರೆ ಎಂದರು.


 ಭಗೀರಥರನ್ನು ಕಠಿಣ ಪರಿಶ್ರಮ, ದೃಡತೆಗೆ ಹೊಲಿಸಲಾಗುತ್ತದೆ. ಅವರ ಸಾಧನೆ ಸಮಾಜಕ್ಕೆ ಮಾದರಿಯಾಗಿದೆ. ಅವರಂತೆ ಸಾಮಾಜಿಕ ನಿಷ್ಠೆ, ಸಮಾಜಮುಖಿ ಕಾರ್ಯಗಳನ್ನು ಅಳವಡಿಸಬೇಕೆಂದು ಶಾಸಕ ಅರವಿಂದ ಬೆಲ್ಲದ ಅವರು ತಿಳಿಸಿದರು.


 ಕಾರ್ಯಕ್ರಮದಲ್ಲಿ ಜಾನಪದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ವೆಂಕನಗೌಡ ಪಾಟೀಲ ಅವರು ವಿಶೇಷ ಉಪನ್ಯಾಸ ನೀಡಿದರು.


 ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.

 ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಕ್ಲಾಸಿಕ್ ಶಿಕ್ಷಣ ಸಂಸ್ಥೆ ಚೇರಮನ್ ಲಕ್ಷ್ಮಣ ಉಪ್ಪಾರ, ಉತ್ಸವ ಸಮಿತಿಯ ಅಧ್ಯಕ್ಷ ಸತೀಶ ಮುರಗೋಡ, ಯುವಕ ಸಂಘದ ಅಧ್ಯಕ್ಷ ಮಹಾಂತೇಶ  ಯಡ್ರಾವಿ, ಹಿರಿಯ ಮುಖಂಡ ಎಸ್. ಜಿ. ಸವಟಗಿ ವೇದಿಕೆಯಲ್ಲಿದ್ದರು.


ಕಾರ್ಯಕ್ರಮದಲ್ಲಿ ಭಾಗ್ಯಶ್ರೀ ಹೂಗಾರ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಆರತಿ ದೇವಶಿಖಾಮಣಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲ ಸಮಾಜದ ಬಾಂಧವರು ಹಾಗೂ ಉಪ್ಪಾರ ಸಮಾಜದವರೂ, ಸಾರ್ವಜನಿಕರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ