Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಜೆ.ಟಿ. ಪಾಟೀಲರಿಗೆ ಸಚಿವ ಸ್ಥಾನ ನೀಡಲು ಮನವಿ

  ಬೀಳಗಿ- ಜಿಲ್ಲೆಯ ಮತ್ತು  ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕಳೆದ 40 ವರ್ಷದ ಸೇವೆ ಸಲ್ಲಿಸಿರುವ ಶಾಸಕ ಜೆ.ಟಿ. ಪಾಟೀಲ ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಬೀಳಗಿ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ (ಟಿ.ಎ.ಪಿ.ಸಿ.ಎಂ.ಸಿ) ಅಧ್ಯಕ್ಷರು, ಪದಾಧಿಕಾರಿಗಳು ಪಕ್ಷದ ಹೈಕಮಾಂಡಗೆ ಮನವಿ ಮಾಡಿದರು .
   ಪಟ್ಟಣದ ಟಿ.ಎ.ಪಿ.ಸಿ.ಎಂ.ಸಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಲ್ಲಯ್ಯ ಕಂಬಿ, ಶಾಸಕ ಜೆ.ಟಿ. ಪಾಟೀಲ ಅವರು ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಜೊತೆಗೆ ಮುತ್ಸದ್ದಿ ರಾಜಕಾರಣಿ. ಪಂಚಾಯತ್ ಮಟ್ಟದಿಂದಲೂ ಪಕ್ಷದ ಕಟ್ಟಾಳುಗಳಾಗಿ ದುಡಿದಿದ್ದು, ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು.
   ಕಳೆದ ಅವಧಿಯಲ್ಲಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ನಂತರ ಅವರನ್ನು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿದ್ದರು. ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ ಪಾಟೀಲರು, ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ ₹400 ಕೋಟಿ ಲಾಭ ತಂದುಕೊಡುವ ಮೂಲಕ ತಮ್ಮ ದಕ್ಷತೆಯನ್ನು ಸಾಬೀತುಪಡಿಸಿದ್ದಾರೆ. ಹೀಗಾಗಿ, ಈ ಬಾರಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ಸೂಕ್ತ ಎಂದು ಹೇಳಿದ ಅವರು ಕ್ರಷ್ಣಾ ಮೇಲ್ದಂಡೆ ಯೋಜನೆ ಹೋರಾಟ ಜೊತೆಗೆ ತಮ್ಮದೆ ಸರ್ಕಾರ ವಿರುದ್ಧ ನಿಂತು ಮುಳುಗಡೆ ಸಂತ್ರಸ್ಥರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದು ಶ್ಲಾಘನೀಯ ಇಂತಹ ನಿಷ್ಠಾವಂತರಿಗೆ ಸಚಿವ ನೀಡಿದರೆ ಪಕ್ಷ ಇನ್ನಷ್ಟು ಬಲಿಷ್ಟ ಆಗಲಿದೆ ಎಂದರು.
  ಸುದ್ದಿಗೋಷ್ಠಿಯಲ್ಲಿ ಮಲ್ಲಪ್ಪ ಕಾಳಗಿ ಮಾತನಾಡಿದರು. ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಸಿ ಉಪಾಧ್ಯಕ್ಷ ಸಿದ್ದು  ಗಿರಗಾಂವಿ, ಸದಸ್ಯರಾದ ದೊಡ್ಡಪ್ಪ, ದೇಸಾಯಿ, ಪಡಿಯಪ್ಪ ತಿರಕನ್ನವರ, ಯಲಗುರ್ದಪ್ಪ, ಬೋರ್ಜಿ, ಬಸಪ್ಪ  ಮುದ್ಧವಗೋಳ, ರಂಗಪ್ಪ, ಹರಿಜನ, ಪಾರ್ವತಿ ಸಿದ್ದಿಂಗಪ್ಪ ಕೋಲ್ದಾರ, ಸುಪೀಯಾ ಬೇಗಂ ಮುಜಾವರ, ರಂಗಪ್ಪ ಯಲ್ಲಪ್ಪ ತೆಗ್ಗಿ, ಸಂಗನಗೌಡ ದುಂಡಪ್ಪ ಗೌಡರ   ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST