Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಲಕ್ಷ್ಮಣ ಸವದಿ

 

ಅಥಣಿ: ತಾಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಲಕ್ಷ್ಮಣ ಸವದಿ ಅವರು ಭೂಮಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳನ್ನು ನೆರವೇರಿಸಿದರು.

Advertisement

ಈ ಸಂದರ್ಭದಲ್ಲಿ ೧ ಕೋಟಿ ವೆಚ್ಚದಲ್ಲಿ ನದಿ ಇಂಗಳಗಾಂವ ಗ್ರಾಮದಿಂದ ವಾಯಾ ಮದನಟ್ಟಿ ವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಶಿವಯೋಗಿಗಳ ತಪೋವನದಲ್ಲಿ ೨೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿದರು. ಇದೇ ವೇಳೆ ನಂದಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ೨೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸಮುದಾಯ ಭವನವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ, "ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯೇ  ನಮ್ಮ ಸಂಕಲ್ಪವಾಗಿದೆ. ರಸ್ತೆ, ಕುಡಿಯುವ ನೀರು, ಸಮುದಾಯ ಭವನ ಸೇರಿದಂತೆ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಜನರ ಅಗತ್ಯಗಳಿಗೆ ಸ್ಪಂದಿಸಿ ಹಂತ ಹಂತವಾಗಿ ಎಲ್ಲ ಮೂಲಸೌಕರ್ಯಗಳನ್ನು ಕಲ್ಪಿಸಲು ಬದ್ಧನಾಗಿದ್ದೇನೆ. ಅಭಿವೃದ್ಧಿ ಕಾರ್ಯಗಳಿಗೆ ಸಾರ್ವಜನಿಕರ ಸಹಕಾರವೂ ಅಗತ್ಯವಾಗಿದೆ," ಎಂದು ಹೇಳಿದರು.

ಈ ವೇಳೆ ಜಿ.ಪಂ. ಅಧಿಕಾರಿ ವೀರಣ್ಣಾ ವಾಲಿ, ಗುತ್ತಿಗೆದಾರ ಶಿವರುದ್ರ ಘೂಳಪ್ಪನವರ, ಈಶ್ವರ ಮುಜಗುಣಿ, ಪಿಕೆಪಿಎಸ್ ಅಧ್ಯಕ್ಷ ವಿಠ್ಠಲ ರಾಚಗೌಡರ, ಗುರಬಸು ತೆವರಮನಿ, ಅಪ್ಪಾಸಾಬ ಮದಬಾವಿ, ನಾಗರಾಜ ಘೂಳಪ್ಪನವರ, ಅಲಗೌಡ ಮುದಗೌಡರ,ಹಣಮಂತ ಸತಿಗೌಡರ,ಶಿವಪುತ್ರ ಗೂಳಪ್ಪನ್ನವರ,ಅಪ್ಪಸಾಬ ಠಕ್ಕಣ್ಣವರ ಮಹಾಂತೇಶ ಘೂಳಪ್ಪನವರ, ಮಹಾಂತೇಶ ಪಾಟೀಲ, ರವಿ ಸಂತಿ, ಶ್ರೀಶೈಲ ಹಲ್ಯಾಳ, ಮಲ್ಲಿಕಾರ್ಜುನ ಕುಳ್ಳೋಳಿ ಸೇರಿದಂತೆ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
 ಔಟಿe ಚಿಣಣಚಿಛಿhmeಟಿಣ
  ?  Sಛಿಚಿಟಿಟಿeಜ bಥಿ ಉmಚಿiಟ

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒತ್ತುವರಿ ತೆರವುಗೊಳಿಸಲು ಆಗ್ರಹಿಸಿ ಮನವಿ"ಜಗತ್ತಿನಲ್ಲಿ ಪ್ರತಿಯೊಂದು ವಸ್ತುವು ಧರ್ಮವನ್ನು ಆಶ್ರಯಿಸಿದೆ"ಉತ್ಪಾದನೆಯಷ್ಟೇ ಬ್ರ್ಯಾಂಡಿಂಗ್, ಮಾರ್ಕೆಟಿಂಗ್‌ಗೂ ಮಹತ್ವ ನೀಡಿ: ಜಯಂತ ಹುಂಬರವಾಡಿವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಲಕ್ಷ್ಮಣ ಸವದಿವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಲಕ್ಷ್ಮಣ ಸವದಿಶಾಸಕ ಬಾಬಾಸಾಹೇಬ  ಪ್ರಯತ್ನದಿಂದ 110 ಕೆ ವಿ ವಿದ್ಯುತ್ ಸ್ಟೇಷನ್ ಮಂಜೂರು.ಪ್ರಿಸಿಷನ್ ಎಂಜಿನಿಯರಿಂಗ್ ಶ್ರೇಷ್ಠತಾ ಕೇಂದ್ರ ಉದ್ಘಾಟನೆ"ಜನರ ಧ್ವನಿಯಾಗಿ ಪತ್ರಿಕೆಗಳು ಕಾರ್ಯ ನಿರ್ವಹಿಸುತ್ತಿರುವದು ಹೆಮ್ಮೆಯ ಸಂಗತಿ"ನಾಳೆ ಲಯನ್ಸ್ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಶಿಕ್ಷಣದಲ್ಲಿ ಭಾರತೀಯತೆಯನ್ನು ತರಬೇಕು-ಕಿರಣ್‌ರಾಮ