ಬಳ್ಳಾರಿ, ಜು.04: ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್ ರೆಡ್ಡಿ ಅವರು ಶುಕ್ರವಾರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಶಾಸಕ ನಾರಾ ಭರತ್ ರೆಡ್ಡಿಯವರು ಮಠಕ್ಕೆ ಭೇಟಿ ನೀಡಿದ ಸಂದರ್ಭ ಮಠದ ಶ್ರೀ ಸುಭುದೇಂದ್ರ ತೀರ್ಥರಿಂದ ದಿವ್ಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಕಟ್ಟೆಮನೆ ನಾಗೇಂದ್ರ, ಹಿರಿಯ ಕಾಂಗ್ರೆಸ್ ನಾಯಕರು ಅಸುಂಡಿ ಹೊನ್ನರಪ್ಪ, ಪರಶುರಾಮುಡು, ಹೊನ್ನಪ್ಪ, ಹಗರಿ ಗೋವಿಂದ, ಗುಂತಕಲ್ ಸುರೇಶ್, ನಾಯ್ಡು ಹಾಗೂ ಇತರ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ, ವಿಶೇಷ ಪ್ರಾರ್ಥನೆ ಮಾಡಿದ ಶಾಸಕ ನಾರಾ ಭರತ್ ರೆಡ್ಡಿ ಅವರು, ಜನರ ಕಲ್ಯಾಣ ಮತ್ತು ಬಳ್ಳಾರಿ ಅಭಿವೃದ್ಧಿಗಾಗಿ ಪಕ್ಷವು ಸತತ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
ಈ ಭೇಟಿಯು ಆಧ್ಯಾತ್ಮಿಕ ಶಕ್ತಿಯನ್ನು ಹೆಚ್ಚಿಸಿದೆ ಎಂದು ತಿಳಿಸಿದರು.