LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರತಿಪಕ್ಷ ನಾಯಕ ಅಶೋಕ್ ವಿರುದ್ಧ ಶಾಸಕ ಪ್ರದೀಪ್‌ ಹಕ್ಕು ಚ್ಯುತಿ ಮಂಡನೆ

ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಸದನದಲ್ಲಿ  ಸೋಮವಾರ ಹಕ್ಕು ಚ್ಯುತಿ ಮಂಡನೆ ಮಾಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವಿಪಕ್ಷ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪ್ರದೀಪ್‌ ಈಶ್ವರ್‌ ಆಗ್ರಹಿಸಿದ್ದಾರೆ.

16ನೇ ವಿಧಾನ ಸಭೆಯ 4ನೇ ಅಧಿವೇಶನದಲ್ಲಿ ಜುಲೈ 19ರಂದು ನಾನು ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ. ಆದ್ದರಿಂದ ಅವರ ಮೇಲೆ ಹಕ್ಕುಚ್ಯುತಿ ಮಂಡಿಸಲು ಅನುಮತಿ ನೀಡಬೇಕು ಎಂದು ಪ್ರದೀಪ್‌ ಈಶ್ವರ್‌ ಮನವಿ ಮಾಡಿದ್ದರು. ಹೀಗಾಗಿ ಹಕ್ಕು ಚ್ಯುತಿ ಮಂಡನೆಗೆ ಸ್ಪೀಕರ್ ಯು.ಟಿ. ಖಾದರ್‌ ಅನುಮತಿ ನೀಡಿದರು.

ಆರ್.ಆಶೋಕ್ ವಿರುದ್ಧ ಹಕ್ಕು ಚ್ಯುತಿ ಮಂಡನೆ ಮಾಡಿ ಮಾತನಾಡಿದ ಪ್ರದೀಪ್ ಈಶ್ವರ್, ಮೊದಲ ಬಾರಿ ಶಾಸಕರಾದಾಗ ಖುಷಿ ಪಡಲು ಆರ್. ಆಶೋಕ್ ಅವರ ತಂದೆ-ತಾಯಿ ಇದ್ದರು. ಆದರೆ, ನಾನು ಶಾಸಕನಾದಾಗ ಖುಷಿ ಪಡಲು ನನ್ನ ತಂದೆ-ತಾಯಿ ಇರಲಿಲ್ಲ. ನಾನು ತಂದೆ-ತಾಯಿ ಕಳೆದುಕೊಂಡು ಪೇರೆಸಂದ್ರ ಗ್ರಾಮದಲ್ಲಿ ಕೂಲಿ ಮಾಡಿದ್ದೇನೆ, ತೋಟಕ್ಕೆ ನೀರು ಹರಿಸಿದ್ದೇನೆ. ಶಾಸಕನಾದ ಬಳಿಕ ಜನರಿಗೆ ಅನುಕೂಲವಾಗಲು 10 ಉಚಿತ ಆಂಬ್ಯುಲೆನ್ಸ್ ನೀಡಿದ್ದೇನೆ. ಅನೇಕ ಮಕ್ಕಳ ವಿಧ್ಯಾಭ್ಯಾಸಕ್ಕೆ ನೆರವಾಗಿದ್ದೇನೆ. ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇನೆ. ಆರ್. ಆಶೋಕ್ ಅಣ್ಣಾನ ಬಗ್ಗೆ ನನಗೆ ಗೌರವ ಇದೆ, ಅವರು ಮಾತುಗಳ ಬಗ್ಗೆ ನನಗೆ ಉತ್ತರ ಕೊಡಲಿ ಎಂದು ಆಗ್ರಹಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್