LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದೇನೆ: ಶಾಸಕ ಯತ್ನಾಳ

ವಿಜಯಪುರ (ಜೂ.23): ನನ್ನ ಮನವೊಲಿಕೆ ಪ್ರಯತ್ನಗಳು ನಡೆಯುತ್ತಲೇ ಇದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡೋದಾಗಿ ಈಚೆಗೆ ನಗರಕ್ಕೆ ಬಂದ ನಾಯಕರು ಭರವಸೆ ನೀಡಿದ್ದರು. ಆದರೆ, ನಾನು ವಿಜಯೇಂದ್ರನೇ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಇಟ್ಟುಕೊಳ್ಳಲಿ, ನಾನು ರಾಜ್ಯಾಧ್ಯಕ್ಷನಾಗುತ್ತೇನೆಂದು ಹೇಳಿದ್ದೇನೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರ ಜೊತೆ ಹೊಂದಾಣಿಕೆ ಆಗುವಂತೆ ಯತ್ನಾಳ ಮನವೊಲಿಕೆಗೆ ಪ್ರಯತ್ನಗಳು ನಡೆಯುತ್ತಲೇ ಇವೆ. ಆದರೆ ನಾನು ಅವರಿಗೆ ಕಾಂಪಿಟೇಟರ್ ಇದ್ದೇನೆ ಎಂದು ತಿಳಿಸಿದರು.

ಕಾಯ್ದೆ ಬದಲಾಗಲಿ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಶಿವಕುಮಾರ ಅಥವಾ ಡಿ.ಕೆ.ಸುರೇಶ ಸ್ಪರ್ಧೆ ಮಾಡುವ ಚರ್ಚೆ ನಡೆದಿರುವ ಕುರಿತು ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದು. ಆದರೆ ಚುನಾವಣೆ ಸ್ಪರ್ಧೆಯ ವಿಚಾರದಲ್ಲಿ ಚುನಾವಣಾ ಆಯೋಗ ಕೆಲ ಕಾಯ್ದೆಗಳನ್ನು ಮಾರ್ಪಾಡು ಮಾಡಬೇಕು. ಒಂದು ಕ್ಷೇತ್ರದಲ್ಲಿ ಸಂಸದ, ಶಾಸಕರು ಆಗಿರುವವರು ಮತ್ತೊಂದು ಕ್ಷೇತ್ರಕ್ಕೆ ಸ್ಪರ್ಧೆ ಮಾಡಲು ಅವಕಾಶ ನೀಡಬಾರದು. ಈ ಕುರಿತು ಹೊಸ ಕಾನೂನು ಜಾರಿ ಮಾಡಬೇಕೆಂದು ಯತ್ನಾಳ ಒತ್ತಾಯಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್