ಚೀನಾದ ಟಿಯಾಂಜಿನ್ನಲ್ಲಿ ನಡೆದ ಈ ಸಮಿಟ್ನಲ್ಲಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಕೂಡ ಪಾಲ್ಗೊಂಡಿದ್ದರು. ಅವರ ಎದುರೇ ಭಾರತವು ಭಯೋತ್ಪಾದನೆ ವಿರುದ್ಧ ವಿವಿಧ ರಾಷ್ಟ್ರಗಳ ಬೆಂಬಲ ಗಳಿಸಿದ್ದು ಅದಕ್ಕೆ ಸಿಕ್ಕ ರಾಜತಾಂತ್ರಿಕ ಗೆಲುವು ಎಂದು ವಿಶ್ಲೇಷಿಸಲಾಗಿದೆ.
2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರಗಾಮಿಗಳು ದಾಳಿ ಮಾಡಿ ಹಲವು ಮಂದಿಯನ್ನು ಗುಂಡಿಟ್ಟು ಬಲಿಪಡೆದಿದ್ದರು. ಶಾಂಘೈ ಸಹಕಾರ ಸಂಘಟನೆಯ ವಿವಿಧ ಸದಸ್ಯ ದೇಶಗಳು ಟಿಯಾಂಜಿನ್ ಘೋಷಣೆಯಲ್ಲಿ ಪಹಲ್ಗಾಂ ಘಟನೆಯನ್ನು ಬಲವಾಗಿ ಖಂಡಿಸಿವೆ.
‘ಸದಸ್ಯ ದೇಶಗಳು ಪಹಲ್ಗಾಂ ಉಗ್ರ ದಾಳಿ ಘಟನೆಯನ್ನು ಬಲವಾಗಿ ಖಂಡಿಸಿವೆ. ಮೃತರು ಮತ್ತು ಗಾಯಾಳುಗಳಿಗೆ ಸಾಂತ್ವನ ವ್ಯಕ್ತಪಡಿಸಿವೆ. ಇಂಥ ದಾಳಿಗಳನ್ನು ಎಸಗಿದವರು, ಬೆಂಬಲ ನೀಡಿದವರಿಗೆ ಶಿಕ್ಷೆಯಾಗಬೇಕು’ ಎಂದು ಟಿಯಾಂಜಿನ್ ಡಿಕ್ಲರೇಶನ್ನಲ್ಲಿ ಹೇಳಲಾಗಿದೆ.