Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರಿಷಸ್ ಪ್ರವಾಸ ಮುಗಿಸಿದ ಮೋದಿ ಮರಳಿ ಭಾರತಕ್ಕೆ

ನವದೆಹಲಿ: ಎರಡು ದಿನಗಳ ಪ್ರವಾಸಕ್ಕಾಗಿ ಮಾರಿಷಸ್​​ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ಮರಳಿದರು. ಮಾರಿಷನ್​ನ ರಾಷ್ಟ್ರೀಯ ದಿನದ ಮುಖ್ಯ ಅತಿಥಿಯಾಗಿ ಅವರು ಪಾಲ್ಗೊಂಡಿದ್ದರು. 2015ರಲ್ಲೂ ಕೂಡ ಆಹ್ವಾನದ ಮೇರೆಗೆ ಮೋದಿ ಮಾರಿಷಸ್‌ಗೆ ಭೇಟಿ ನೀಡಿದ್ದರು.


ಮಾರಿಷಸ್​ ಪ್ರಧಾನಿ, ಜನರು ಮತ್ತು ಮಾರಿಷಸ್​ ಸರ್ಕಾರದ ಪ್ರೀತಿಗಾಗಿ ಧನ್ಯವಾದ ಸಲ್ಲಿಸಿ ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದಾರೆ. ಹಾಗೆಯೇ ತಮ್ಮ ಪ್ರವಾಸದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.


ಈ ಪ್ರವಾಸದ ವೇಳೆ ಮೋದಿ ಮಾರಿಷಸ್​ನಲ್ಲಿರುವ ಭಾರತೀಯ ಸಮುದಾಯದವರು ಹಾಗೂ ಮಾರಿಷಸ್​ ನಾಯಕರ ಜೊತೆಗೆ ಸಭೆ ನಡೆಸಿದ್ದರು. ಅಲ್ಲಿನ ಗಂಗಾ ತಲಾವೊಗೆ ಭೇಟಿ ನೀಡಿ, ಮಹಾಕುಂಭದಿಂದ ತೆಗೆದುಕೊಂಡು ಹೋಗಿದ್ದ ಪವಿತ್ರ ಗಂಗಾ ಜಲವನ್ನು ಅದಕ್ಕೆ ಮಿಶ್ರಣ ಮಾಡಿದ್ದರು.


"ಮಾರಿಷಸ್​​ನ ಗಂಗಾ ತಲಾವೊನಲ್ಲಿ ತ್ರಿವೇಣಿ ಸಂಗಮದ ಪವಿತ್ರ ಜಲವನ್ನು ಅರ್ಪಿಸಿದೆ. ಜಗತ್ತಿನಲ್ಲಿರುವ ಲಕ್ಷಾಂತರ ಹಿಂದುಗಳಿಗೆ ತ್ರಿವೇಣಿ ಸಂಗಮದ ಜಲ ವಿಶೇಷವಾಗಿದೆ. ಈ ಬಾರಿಯ ಮಹಾ ಕುಂಭಮೇಳ ಮಾರಿಷಸ್​ ಸೇರಿದಂತೆ ಜಗತ್ತಿನ ಎಲ್ಲೆಡೆಯ ಯಾತ್ರಿಕರನ್ನು ಸೆಳೆದಿದೆ. ಈ ನೀರನ್ನು ಸೇರಿಸುವ ಮೂಲಕ ಗಂಗಾ, ಯಮುನಾ ಮತ್ತು ಸರಸ್ವತಿಯ ಆಶೀರ್ವಾದ ನಿಮ್ಮ ಮೇಲೆ ಸದಾ ಉಳಿಯಲಿ" ಎಂದು ಮೋದಿ ಆಶಿಸಿದ್ದಾರೆ.


ಈ ಭೇಟಿಯಲ್ಲಿ ಪ್ರಧಾನಿಗೆ ಮಾರಿಷಸ್​ ದೇಶದ ಅತ್ಯುನ್ನತ ಗೌರವ 'ಗ್ರಾಂಡ್​ ಕಮಾಂಡರ್​ ಆಫ್​ ದಿ ಆರ್ಡರ್​ ಆಫ್​ ದ ಸ್ಟಾರ್​ ಆ್ಯಂಡ್​ ಕೀ ಆಫ್‌ದ ಇಂಡಿಯನ್​ ಓಷನ್​ ಪ್ರಶಸ್ತಿ' ನೀಡಿ ಪುರಸ್ಕರಿಸಲಾಯಿತು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ