Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದಲ್ಲಿ ಬಂಡವಾಳ ದ್ವಿಗುಣ: ಜಪಾನ್‌ನಲ್ಲಿ ಮೋದಿ ಮಾತು

ಟೋಕಿಯೋ: ಎರಡು ದಿನಗಳ ಪ್ರವಾಸಕ್ಕಾಗಿ ಜಪಾನ್​ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆಯ ಕುರಿತು ಒತ್ತಿ ಹೇಳಿದ್ದಾರೆ.

ಭಾರತದಲ್ಲಿ ಬಂಡವಾಳ ಬೆಳವಣಿಗೆ ಕಾಣುವುದು ಮಾತ್ರವಲ್ಲ, ದ್ವಿಗುಣಗೊಂಡಿದೆ. ರಾಜಕೀಯ ಸ್ಥಿರತೆ ಮತ್ತು ಪಾರದರ್ಶಕತೆ ಇದಕ್ಕೆ ಕಾರಣ. ದೇಶ ಜಗತ್ತಿನ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಎಂದರು.

ಭಾರತದಲ್ಲಿ ಕಳೆದ 11 ವರ್ಷದಲ್ಲಿ ಬೆಳವಣಿಗೆ ಮತ್ತು ಸಾಕಷ್ಟು ಸುಧಾರಣೆಗಳು ಆಗುತ್ತಿರುವುದರ ಬಗ್ಗೆ ನಿಮಗೆ ಅರಿವಿದೆ. ದೇಶ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಶೀಘ್ರದಲ್ಲೇ ನಾವು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ದೇಶವಾಗಲಿದ್ದೇವೆ. ಜಾಗತಿಕ ಜಿಡಿಪಿಗೆ ನಮ್ಮ ಕೊಡುಗೆ ಶೇ.18ರಷ್ಟಿದೆ. ಸುಧಾರಣೆ, ಪರಿವರ್ತನೆ ಮತ್ತು ಕಾರ್ಯಕ್ಷಮತೆಯ ನಮ್ಮ ವಿಧಾನ ಈ ಎಲ್ಲಾ ಪ್ರಗತಿಗೆ ಚಾಲನೆ ನೀಡುತ್ತಿದೆ ಎಂದು ಭಾರತ-ಜಪಾನ್​ ಜಂಟಿ ಆರ್ಥಿಕ ವೇದಿಕೆಯಲ್ಲಿ ಮೋದಿ ಮಾತನಾಡಿದರು.

ಕಳೆದೊಂದು ದಶಕದಿಂದ ಭಾರತ ಮುಂದಿನ ಪೀಳಿಗೆಯ ಚಲನಶೀಲನತೆ ಮತ್ತು ಲಾಜಿಸ್ಟಿಕ್​ ಮೂಲಸೌಕರ್ಯದಲ್ಲಿ ಅದ್ಬುತ ಪ್ರಗತಿ ಕಾಣುತ್ತಿದೆ. ನಮ್ಮ ಬಂದರು ಸಾಮರ್ಥ್ಯ ದುಪ್ಪಟ್ಟಾಗಿದೆ. ಜಪಾನ್​ ಸಹಕಾರದಿಂದಾಗಿ ಮುಂಬೈ-ಅಹಮದಾಬಾದ್​ ಹೈ ಸ್ಪೀಡ್​ ರೈಲು ಯೋಜನೆ ಕಾರ್ಯ ನಿರ್ವಹಣೆ ಮಾಡಲಿದೆ. ನಮ್ಮ ಪ್ರಯಾಣ ಇಲ್ಲಿಗೆ ನಿಲ್ಲುವುದಿಲ್ಲ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ