Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತದಲ್ಲಿ ಬಂಡವಾಳ ದ್ವಿಗುಣ: ಜಪಾನ್‌ನಲ್ಲಿ ಮೋದಿ ಮಾತು

ಟೋಕಿಯೋ: ಎರಡು ದಿನಗಳ ಪ್ರವಾಸಕ್ಕಾಗಿ ಜಪಾನ್​ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕಾರವಧಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆಯ ಕುರಿತು ಒತ್ತಿ ಹೇಳಿದ್ದಾರೆ.

ಭಾರತದಲ್ಲಿ ಬಂಡವಾಳ ಬೆಳವಣಿಗೆ ಕಾಣುವುದು ಮಾತ್ರವಲ್ಲ, ದ್ವಿಗುಣಗೊಂಡಿದೆ. ರಾಜಕೀಯ ಸ್ಥಿರತೆ ಮತ್ತು ಪಾರದರ್ಶಕತೆ ಇದಕ್ಕೆ ಕಾರಣ. ದೇಶ ಜಗತ್ತಿನ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಎಂದರು.

ಭಾರತದಲ್ಲಿ ಕಳೆದ 11 ವರ್ಷದಲ್ಲಿ ಬೆಳವಣಿಗೆ ಮತ್ತು ಸಾಕಷ್ಟು ಸುಧಾರಣೆಗಳು ಆಗುತ್ತಿರುವುದರ ಬಗ್ಗೆ ನಿಮಗೆ ಅರಿವಿದೆ. ದೇಶ ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಶೀಘ್ರದಲ್ಲೇ ನಾವು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆ ಹೊಂದಿರುವ ದೇಶವಾಗಲಿದ್ದೇವೆ. ಜಾಗತಿಕ ಜಿಡಿಪಿಗೆ ನಮ್ಮ ಕೊಡುಗೆ ಶೇ.18ರಷ್ಟಿದೆ. ಸುಧಾರಣೆ, ಪರಿವರ್ತನೆ ಮತ್ತು ಕಾರ್ಯಕ್ಷಮತೆಯ ನಮ್ಮ ವಿಧಾನ ಈ ಎಲ್ಲಾ ಪ್ರಗತಿಗೆ ಚಾಲನೆ ನೀಡುತ್ತಿದೆ ಎಂದು ಭಾರತ-ಜಪಾನ್​ ಜಂಟಿ ಆರ್ಥಿಕ ವೇದಿಕೆಯಲ್ಲಿ ಮೋದಿ ಮಾತನಾಡಿದರು.

ಕಳೆದೊಂದು ದಶಕದಿಂದ ಭಾರತ ಮುಂದಿನ ಪೀಳಿಗೆಯ ಚಲನಶೀಲನತೆ ಮತ್ತು ಲಾಜಿಸ್ಟಿಕ್​ ಮೂಲಸೌಕರ್ಯದಲ್ಲಿ ಅದ್ಬುತ ಪ್ರಗತಿ ಕಾಣುತ್ತಿದೆ. ನಮ್ಮ ಬಂದರು ಸಾಮರ್ಥ್ಯ ದುಪ್ಪಟ್ಟಾಗಿದೆ. ಜಪಾನ್​ ಸಹಕಾರದಿಂದಾಗಿ ಮುಂಬೈ-ಅಹಮದಾಬಾದ್​ ಹೈ ಸ್ಪೀಡ್​ ರೈಲು ಯೋಜನೆ ಕಾರ್ಯ ನಿರ್ವಹಣೆ ಮಾಡಲಿದೆ. ನಮ್ಮ ಪ್ರಯಾಣ ಇಲ್ಲಿಗೆ ನಿಲ್ಲುವುದಿಲ್ಲ ಎಂದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*