Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಬಲ್‌ಪುರದಲ್ಲಿ ಮೋದಿ ಬೃಹತ್ ರೋಡ್‌ಶೋ: ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ

ಜಬಲ್‌ಪುರ,ಏಪ್ರಿಲ್​ 08:: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಜಬಲ್‌ಪುರದಲ್ಲಿ ಬೃಹತ್ ರೋಡ್‌ಶೋ ನಡೆಸುವ ಮೂಲಕ ಮಧ್ಯಪ್ರದೇಶದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ಮಧ್ಯ ಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ PWD ಸಚಿವ ರಾಕೇಶ್ ಸಿಂಗ್ ಮತ್ತು ಪಕ್ಷದ ಜಬಲ್ಪುರ ಲೋಕಸಭಾ ಅಭ್ಯರ್ಥಿ ಆಶಿಶ್ ದುಬೆ ಅವರು ಪ್ರಧಾನಿ ಮೋದಿ ಜತೆಗೆ ಇದ್ದರು.

ರೋಡ್‌ಶೋ ಶಹೀದ್ ಭಗತ್ ಸಿಂಗ್ ಕ್ರಾಸಿಂಗ್‌ನಿಂದ ಸಂಜೆ 6:30 ರ ಸುಮಾರಿಗೆ ಪ್ರಾರಂಭವಾಯಿತು ಮತ್ತು ರಾತ್ರಿ 7:15 ಕ್ಕೆ ಇಲ್ಲಿನ ಗೋರಖ್‌ಪುರ ಪ್ರದೇಶದ ಆದಿ ಶಂಕರಾಚಾರ್ಯ ಕ್ರಾಸಿಂಗ್‌ನಲ್ಲಿ ಮುಕ್ತಾಯವಾಯಿತು.

ಲೋಕಸಭೆ ಚುನಾವಣೆ ಘೋಷಣೆಯಾದ ನಂತರ ಮಧ್ಯ ಪ್ರದೇಶಕ್ಕೆ ಮೊದಲ ಬಾರಿ ಪ್ರಧಾನಿ ಮೋದಿ ಭೇಟಿ ನೀಡಿದ್ದು, ಸಿಎಂ ಮೋಹನ್ ಯಾದವ್ ಮತ್ತು ಇತರ ಬಿಜೆಪಿ ನಾಯಕರು ಪ್ರಧಾನಿ ಮೋದಿಗೆ ಸಾಥ್ ನೀಡಿದರು.

ಬಿಸಿಲಿನ ತಾಪದ ನಡುವೆಯೂ ಮಧ್ಯಾಹ್ನ 3 ಗಂಟೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನ ಮಾರ್ಗದ ಎರಡೂ ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದರು ಮತ್ತು ಮೊಬೈಲ್ ಫೋನ್‌ಗಳನ್ನು ಬಳಸಿಕೊಂಡು ಛಾಯಾಚಿತ್ರಗಳನ್ನು ಕ್ಲಿಕ್ಕಿಸುತ್ತಾ ಮತ್ತು ವೀಡಿಯೊಗಳನ್ನು ಶೂಟ್ ಮಾಡುತ್ತಿದ್ದರು.

ಅವರಲ್ಲಿ ಹಲವರು 'ಮೇರಾ ಘರ್ ಮೋದಿ ಕಾ ಘರ್' ಮತ್ತು 'ಮೇರಾ ಪರಿವಾರ್ ಮೋದಿ ಕಾ ಪರಿವಾರ್' ಎಂಬ ಫಲಕಗಳನ್ನು ಹಿಡಿದಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ