Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಡಲಗಿ : ಸಡಗರ ಸಂಭ್ರಮದ ರಂಜಾನ್ ಆಚರಣೆ

ಮೂಡಲಗಿ: ಸಕಲ ಜೀವರಾಶಿಗಳನ್ನು ಪ್ರೀತಿಸುತ್ತ ದಯೆ,ಕರುಣೆ ಹೊಂದಿ ಯಾರ ಕೇಡನ್ನು ಬಯಸದೆ ಇರುವುದು ನಿಜವಾದ ಮನು? ಧರ್ಮವಾಗಿದೆ ಎಂದು ಧರ್ಮ ಗುರುಗಳಾದ ಮೌಲಾನಾ ಮೊಹಮ್ಮದ್ ಶಫೀಕ್ ಆಜ್ಮಿ ಹೇಳಿದರು.
ಪಟ್ಟಣದ ಈದ್ಗಾ ಮೈದಾನದಲ್ಲಿ ಬಿಟಿಟಿ ಕಮಿಟಿ ನೇತೃತ್ವದಲ್ಲಿ ಹಾಗೂ ವಿವಿಧ ಕಮಿಟಿಗಳ ಸಹಕಾರದಲ್ಲಿ ಪವಿತ್ರ ರಂಜಾನ್ ಹಬ್ಬದ ಈದುಲ್ ಫಿತರನ ಸಾಮೂಹಿಕ ಪ್ರಾರ್ಥನೆಗೆ ಸೇರಿದ ಸರ್ವ ಬಾಂಧವರನ್ನು ಉದ್ದೇಶಿಸಿ ಮಾತನಾಡಿದ ಅವರು, ಪರೋಪಕಾರ, ಸಮಾನತೆ ಮತ್ತು ಸೌಹಾರ್ದತೆಯ ಧರ್ಮದ ನಿಜತೆಯನ್ನು ಅರಿತು ದ್ವೇ?, ಅಸೂಯೆ ಬಿಟ್ಟು ಪರಸ್ಪರರು ಅನ್ಯೋನ್ಯತೆ ಹೊಂದಿ ಅಲ್ಲಾಹನ ಪ್ರೀತಿಗೆ ಪಾತ್ರರಾಗಬೇಕು ಎಂದು ಹಿತ ವಚನ ಹೇಳಿದರು.
ಸಾಮೂಹಿಕ ಪ್ರಾರ್ಥನೆ ಬಳಿಕ ಪರಸ್ಪರರು ಸಡಗರ ಸಂಭ್ರಮದಿಂದ ರಂಜಾನ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ವೇಳೆ ಅರಭಾವಿ ಜನಪ್ರೀಯ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಚಿವ ಸತೀಶ ಜಾರಕಿಹೊಳಿ ಹಾಗೂ ಬೆಳಗಾವಿ ಶಾಸಕ ರಾಜು ಶೇಠ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿ ಶುಭ ಹಾರೈಸಿ ಕಳುಹಿಸಿದ ಸಂದೇಶ ಪತ್ರವನ್ನು ಪುರಸಭೆ ಮಾಜಿ ಅಧ್ಯಕ್ಷ ಅಜೀಜ್ ಡಾಂಗೆ ಅವರು ಓದಿ ಹೇಳಿದರು. ಮುಖಂಡರಾದ ಲಾಲಸಾಬ ಸಿದ್ದಾಪೂರ ಅವರು ರಂಜಾನ ಹಬ್ಬದ ಪ್ರಾರ್ಥನೆಗಾಗಿ ಸಹಕರಿಸಿದ ಸಿಪಿಐ , ಪಿಎ??? , ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ಹಾಗೂ ಪೋಲೀಸ್ ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನು ಹೇಳಿದರು.
ಈ ಸಂದರ್ಭದಲ್ಲಿ ಬಿಟಿಟಿ ಕಮಿಟಿಯ ಅಧ್ಯಕ್ಷ ಅನ್ವರ್ ನದಾಫ್, ಉಪಾಧ್ಯಕ್ಷ ಹುಸೇನ್ ಥರಥರಿ ಕಾರ್ಯದರ್ಶಿ ಬುಡನಸಾಬ ಡಾಂಗೆ, ಖಜಾಂಚಿ ಅಬ್ದುಲಗಫಾರ ಡಾಂಗೆ, ರಾಜು ಅತ್ತಾರ, ಮುಸ್ತಫಾ ತಾಂಬೋಳಿ, ಆದಮಸಾಬ ತಾಂಬೋಳಿ, ಶರೀಫ್ ಪಟೇಲ್ ಸುಲ್ತಾನಸಾಬ ಕಳ್ಳಿಮನಿ, ಹಸನ ಥರಥರಿ, ಅಬ್ದುಲಸಾಬ ಇನಾಮದಾರ, ರೆಹಮಾನ್ ಝಾರೆ, ಇರ್ಶಾದ್ ಇನಾಮದಾರ,ದಾದು ಮುಗುಟಖಾನ, ಮಲೀಕ ಹುಣಶ್ಯಾಳ, ಹುಸೇನಸಾಬ ಶೇಖ, ನನ್ನುಸಾಬ ಶೇಖ, ಮಲೀಕ ಪಾಶ್ಚಾಪೂರ, ಲಾಲಸಾಬ ಸೈಯದ್, ಸಾಕೀಬ್ ಪೀರಜಾದೆ, ಸಾಹೇಬ್ ಪೀರಜಾದೆ, ಕುತುಬುದ್ದೀನ ನೇಸರ್ಗಿ, ಸೇರಿದಂತೆ ಸಮಾಜದ ಅನೇಕ ಗಣ್ಯರು ಉಪಸ್ಥಿತರಿದ್ದರು.

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ