LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಕೀನ್ಯಾದಲ್ಲಿ ಭಾರಿ ಮಳೆ, ಪ್ರವಾಹದಿಂದಾಗಿ 38ಕ್ಕೂ ಹೆಚ್ಚಿನ ಜನರು ಸಾವು

ನೈರೋಬಿ,25: ಕೀನ್ಯಾದಲ್ಲಿ ಭಾರಿ ಮಳೆಯಿದ ಪ್ರವಾಹ ಉಂಟಾಗಿ 38ಕ್ಕೂ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ ಎಂದು ಕೀನ್ಯಾ ರೆಡ್‌ಕ್ರಾಸ್ ಸೊಸೈಟಿ ತಿಳಿಸಿದೆ. ಪ್ರವಾಹದಿಂದಾಗಿ ಕೀನ್ಯಾದ ಅರ್ಧದಷ್ಟು ಭಾಗವು ಮುಳುಗಡೆಯಾಗಿದ್ದು, ಇದರಿಂದ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಅಲ್ಲದೇ ಅನೇಕ ಜನರು ನಾಪತ್ತೆಯಾಗಿದ್ದು, ಈ ಪೈಕಿ 180 ಜನರನ್ನು ರಕ್ಷಣೆ ಮಾಡಲಾಗಿದೆ. ಸುಮಾರು 11 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.


ಸ್ಥಳೀಯ ಸುದ್ದಿ ಸಂಸ್ಥೆ ವರದಿ ಪ್ರಕಾರ, ಕೀನ್ಯಾದ ರಾಜಧಾನಿ ನೈರೋಬಿಯಲ್ಲೂ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಒರ್ವ ವ್ಯಕ್ತಿ ಸಾವನ್ನಪ್ಪಿದ್ದು, ಆರು ಜನರು ಕಾಣೆಯಾಗಿದ್ದಾರೆ. ಅನೇಕ ಕಡೆ ರಸ್ತೆ ಸಂಪರ್ಕಗಳು ಕಡಿತಗೊಂಡಿದ್ದು ಕೆಲವೆಡೆ ರಸ್ತೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ತೀವ್ರ ಪ್ರವಾಹದಿಂದಾಗಿ ಅನೇಕ ಜನರು ಮನೆಗಳಲ್ಲಿ ಸಿಲುಕಿದ್ದು ರಕ್ಷಣೆ ಕಾರ್ಯ ಮುಂದುವರೆದಿದೆ. ಒಟ್ಟು 110,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ. ಕಳೆದ ಕೆಲ ದಿನಗಳಿಂದ ಕೀನ್ಯಾದಲ್ಲಿ ಬಿಟ್ಟೂ ಬಿಡದೇ ಮಳೆ ಸುರಿಯುತ್ತಿದ್ದು ಕಳೆದ ವಾರ ದೇಶದ ಹಲವು ಭಾಗಗಳಲ್ಲಿ 100 ಮಿ.ಮೀ.ಗೂ ಹೆಚ್ಚು ಮಳೆಯಾಗಿತ್ತು. ಈ ವೇಳೆ ಆರು ಜನ ಸಾವನ್ನಪ್ಪಿದ್ದರು.


ಸೇತುವೆ ಮುಳುಗಡೆ: ನೈರೋಬಿಯಾದ ಅಥಿ ನದಿ ಸೇತುವೆ ಪ್ರವಾಹಕ್ಕೆ ಸಿಲುಕಿ ಮುಳುಗಡೆಯಾಗಿದ್ದು ಪ್ರಮುಖ ನಗರಗಳ ರಸ್ತೆ ಸಂಪರ್ಕ ಕಡೆತಗೊಂಡಿದೆ. ಇದರಿಂದ ಸಾವಿರಾರು ಉದ್ಯೋಗಿಗಳು, ವ್ಯಾಪಾರಸ್ಥರು ಸೇತುವೆ ದಾಟಲಾಗದೇ ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಇವರೆಲ್ಲ ರಕ್ಷಣೆಯ ನಿರೀಕ್ಷೆಯಲ್ಲಿದ್ದಾರೆ. ರಕ್ಷಣಾ ಕಾರ್ಯಗಳನ್ನು ಅಲ್ಲಿನ ಸರ್ಕಾರ ಮಾಡುತ್ತಿದೆ.


ಭೀಕರ ಪ್ರವಾಹದಿಂದ ಸುಮಾರು 27,716 ಎಕರೆಗಳಷ್ಟು ಬೆಳೆಗಳು ನಾಶವಾಗಿದ್ದು, 5,000ಕ್ಕೂ ಹೆಚ್ಚಿನ ಜಾನುವಾರುಗಳು ಸಾವನ್ನಪ್ಪಿವೆ ಎಂದು ವರಿಯಾಗಿದೆ.


ವಿಪತ್ತು ಕಾರ್ಯಾಚರಣೆಯ ಮುಖ್ಯಸ್ಥ ವೆನಂತ್ ನ್ಧಿಗಿಲಾ, " ಕಳೆದ ವಾರದಿಂದ ಜೋರು ಮಳೆಯಾಗುತ್ತಿದ್ದು ಪ್ರವಾಹ ಉಂಟಾಗಿದೆ. ಈಗಾಗಲೇ ಅನೇಕ ಜನರು ಸಾವನ್ನಪ್ಪಿದ್ದಾರೆ. ಸದ್ಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಹಲಾವರು ಕಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಸಮಸ್ಯೆ ಉಂಟಾಗಿದೆ. ನಮ್ಮ ತಂಡದೊಂದಿಗೆ ಸಾಧ್ಯವಾದಷ್ಟು ಪ್ರಯತ್ನ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್