ಆರೋಪಿ ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಕೊನೆಗೂ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲ್ಲು ತೂರಾಟ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸದೇ ಇರುವ ಸರ್ಕಾರದ ನಡೆಯನ್ನು ಖಂಡಿಸಿದ್ದ ಬಿಜೆಪಿ ನಾಯಕ ಪ್ರತಾಪ್ ಸಿಂಹ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ತಾಲಿಬಾನಿಗೆ ಹೋಲಿಸಿದ್ದರು. ಮುಸ್ಲಿಮರು ಭದ್ರತೆ ಕೇಳಿದರೆ ಸರ್ಕಾರ ನೀಡಲಿ, ಯಾರು ಬೇಡವೆನ್ನುತ್ತಾರೆ? ಅದರೆ ಅವರು ದುಷ್ಕೃತ್ಯ ಎಸಗಿದಾಗ ಬಂಧಿಸಿ ದಂಡಿಸುವುದನ್ನು ಬಿಟ್ಟು ಯಾವುದೇ ಕ್ರಮ ತೆಗೆದುಕೊಳ್ಳದಿದ್ದರೆ ಅವರನ್ನು ತಡೆಯುವುದು ಹೇಗೆ? ಅವರಿಗೆ ಹೆದರಿ ಹಿಂದೂಗಳು ಮನೆ ಬಿಟ್ಟು ಬೇರೆ ಕಡೆ ಹೋಗಬೇಕೇ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದರು. ಸಿಟಿ ರವಿ ಕೂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.