Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಮ್‌ಪಿ, ಎಮ್‌ಎಲ್‌ಸಿ ಪ್ರದೇಶಾಭಿವೃದ್ಧಿಗಳ ಅನುದಾನದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಗದಗ ಅಗಸ್ಟ 9: ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ಪ್ರದೇಶಾಬಿವೃದ್ಧಿ ಅನುದಾನದಡಿಯಲ್ಲಿ ಕೈಗೊಂಡ ಕಾಮಗಾರಿಗಳ ಕುರಿತಂತೆ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನೆ ಜರುಗಿತು.
ಎಮ್‌ಪಿ ಹಾಗೂ ಎಮ್‌ಎಲ್‌ಸಿ ಪ್ರದೇಶಾಭಿವೃದ್ಧಿ ಅನುದಾನದಡಿ ಕೈಗೊಂಡ ಕಾಮಗಾರಿಗಳ ಪ್ರಗತಿ ಪರಿಶೀಲನೆಯು ಕೆಡಿಪಿ ಸಭೆಯಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲಾಗುತ್ತದೆ. ಕೆಡಿಪಿ ವರದಿಯನ್ನು ನೇರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಗಮನಿಸುವರು. ಇದನ್ನೆಲ್ಲ ಅನುಷ್ಟಾನ ಏಜೆನ್ಸಿಗಳು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ನಿರ್ವಹಿಸಬೇಕು ಎಂದರು.


ಕಾಮಗಾರಿ ನಿರ್ವಹಿಸುವಾಗ ನಿಗದಿಪಡಿಸಿದ ಅವಧಿ ಹಾಗೂ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಾಮಗಾರಿ ಅನಷ್ಟಾನದಲ್ಲಿ ತೊಡುಕುಗಳು ಎದುರಾದಲ್ಲಿ ತಕ್ಷಣವೇ ಜಿಲ್ಲಾಡಳಿತದ ಹಾಗೂ ಸಂಬAಧಿಸಿದ ಜನಪ್ರತಿನಿಧಿಗಳ ಗಮನಕ್ಕೆ ತರುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.


2022-23 ಹಾಗೂ 2023-24ರ ಆರ್ಥಿಕ ವರ್ಷದಲ್ಲಿ ಕೈಗೊಂಡ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಪೂರ್ಣಗೊಳಿಸಿದ ಮಾಹಿತಿಯನ್ನು ಮುಂದಿನ ಒಂದು ವಾರದೊಳಗಾಗಿ ಗಾಂಧೀ ಸಾಕ್ಷಿ ಪೋರ್ಟಲನಲ್ಲಿ ನಿಯಮಾನುಸಾರ ಛಾಯಾಚಿತ್ರಗಳೊಂದಿಗೆ ಅಪ್‌ಲೋಡ್ ಮಾಡಬೇಕು. ವಿನಾಕಾರಣ ನೊಂದಣಿಗೆ ವಿಳಂಬ ಬೇಡ ಎಂದು ಸೂಚಿಸಿದರು.


ಕಾಮಗಾರಿ ಪೂರ್ಣಗೊಳಿಸಿದ ಬಗ್ಗೆ ಥರ್ಡ ಪಾರ್ಟಿ ಪರಿಶೀಲನಾ ವರದಿ ಕಡ್ಡಾಯವಾಗಿದೆ. 2023-24 ರ ಕಾಮಗಾರಿಗಳಿಗೆ ಸಂಬAಧಿಸಿದAತೆ ಅನುಷ್ಟಾನ ಏಜೆನ್ಸಿಗಳು ಅಗಸ್ಟ 20 ರೊಳಗಾಗಿ ಬಾಕಿಉಳಿದ ಅಂದಾಜು ಪಟ್ಟಿ ಸಲ್ಲಿಸಬೇಕು. ಜೊತೆಗೆ ಕಾಮಗಾರಿ ಪೂರ್ಣಗೊಳಿಸಿದ ಕುರಿತಂತೆ ಬಳಕೆ ಪ್ರಮಾಣ ಪತ್ರ ನೀಡಬೇಕು. ಒಟ್ಟಾರೆ ಒದಗಿಸಿದ ಅನುದಾನ ಸದ್ಭಳಕೆಯಾಗುವಂತೆ ಅನುಷ್ಟಾನ ಏಜೆನ್ಸಿಗಳು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.


ಕಾಮಗಾರಿ ಬದಲಾವಣೆಗೆ ಬಯಸಿದಲ್ಲಿ ಸಂಬAಧಿತ ಜನಪ್ರತಿನಿಧಿಗಳಿಂದ ಕಾಮಗಾರಿ ಬದಲಾವಣೆ ಕುರಿತಂತೆ ಮಾಹಿತಿ ಸಲ್ಲಿಸಿ ಕಾಮಗಾರಿ ಮಾರ್ಪಡಿಸಲು ಅವಕಾಶವಿದ್ದು ಅನುಷ್ಟಾನ ಏಜೆನ್ಸಿಗಳು ಈ ಕುರಿತಂತೆ ಸೂಕ್ತ ಕ್ರಮಗಳನ್ನು ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಆರ್ ಅವರು ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ನಿರ್ಮಿತಿ ಕೇಂದ್ರ , ಪಿ ಆರ್ ಇಡಿ, ಕೆ ಆರ್ ಐ ಡಿ ಎಲ್ , ಗ್ರಾಮೀಣ ನೀರು ಸರಬರಾಜು, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಅನುಷ್ಟಾನ ಏಜೆನ್ಸಿ ಹಾಗೂ ಇಲಾಖೆಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡು ತಮಗೆ ವಹಿಸಿದ ಕಾಮಗಾರಿಗಳ ಕುರಿತು ಪ್ರಗತಿ ವರದಿಯನ್ನು ನೀಡಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ