*ಬಳ್ಳಾರಿ, ಆ.28: ರಾಜ್ಯಸಭಾ ಸದಸ್ಯರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸೈಯ್ಯದ್ ನಾಸೀರ್ ಹುಸೇನ್ ಅವರು ಇಂದು ನಗರದ ವಿಮ್ಸ್ (VIMS) ಆಸ್ಪತ್ರೆ ಹತ್ತಿರದ ಮದರ್ ತೆರೇಸಾ ಅನಾಥಾಶ್ರಮಕ್ಕೆ ಭೇಟಿ ನೀಡಿದರು.
ಆಶ್ರಮಕ್ಕೆ ಭೇಟಿ ನೀಡಿದ ಅವರು ಮಕ್ಕಳೊಂದಿಗೆ ಬೆರೆತು ಅವರ ಯೋಗಕ್ಷೇಮ ವಿಚಾರಿಸಿದರು.
ಮಕ್ಕಳಿಗೆ ಆಹಾರ, ಸಿಹಿ ಹಂಚಿ, ಅವರೊಂದಿಗೆ ಸಮಯ ಕಳೆದು ಆತ್ಮೀಯವಾಗಿ ಮಾತನಾಡಿದರು.
ಅನಾಥ ಮಕ್ಕಳ ಸೇವೆಯಲ್ಲಿ ತೊಡಗಿರುವ ಆಶ್ರಮದ ಸಿಸ್ಟರ್ಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ ಅವರು, ಅನಾಥಾಶ್ರಮಕ್ಕೆ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಆಶ್ರಮದ ಸಿಬ್ಬಂದಿ ಉಪಸ್ಥಿತರಿದ್ದರು.