ಬೆಂಗಳೂರು: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ನಸುಕಿನ 1.10 ರ ಸುಮಾರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾದ 33 ವರ್ಷದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಮಹಿಳಾ ತಂಡವು ಪೊಲೀಸ್ ಜೀಪ್ನಲ್ಲಿ ಮಧ್ಯರಾತ್ರಿ 2.02ರ ಸುಮಾರಿಗೆ ಎಸ್ಐಟಿ ಕಚೇರಿಗೆ ಕರೆತಂದಿತು. ಇದೀಗ ಎಸ್ಐಟಿ ಕಚೇರಿಯಲ್ಲಿ ಪ್ರಜ್ವಲ್ ರಾತ್ರಿ ಕಳೆದಿದ್ದಾರೆ.
ಪ್ರಜ್ವಲ್ ಅವರನ್ನು ಶುಕ್ರವಾರ ಬೆಳಗ್ಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.
ಶುಕ್ರವಾರ ಬೆಳಗ್ಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಅತ್ಯಾಚಾರ ಘಟನೆಗಳು ನಡೆದಿವೆ ಎಂದು ಹೇಳಲಾದ ಪ್ರಜ್ವಲ್ ರೇವಣ್ಣ ಅವರ ವಸತಿ ಗೃಹ ಮತ್ತು ಹೊಳೆನರಸೀಪುರದ ಫಾರ್ಮ್ ಹೌಸ್ಗಳಿಗೆ ಸ್ಥಳ ಮಹಜರಿಗಾಗಿ ಅವರನ್ನು ಕರೆದೊಯ್ಯಬೇಕಾಗಿರುವುದರಿಂದ ಎಸ್ಐಟಿ ಅವರನ್ನು ಕಸ್ಟಡಿಗೆ ಕೇಳಲಿದೆ. ಬಳಿಕ ಎಸ್ಐಟಿ ಅಧಿಕಾರಿಗಳು ವಿವರವಾದ ಹೇಳಿಕೆಗಳನ್ನು ದಾಖಲಿಸಿಕೊಳ್ಳಬೇಕಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.