Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಡಿಕೆಶಿ ಭೇಟಿಯಾಗಿ ಆಶೀರ್ವಾದ ಪಡೆದ ಸಂಸದೆ ಪ್ರಿಯಂಕಾ ಜಾರಕಿಹೊಳಿ





ಬೆಂಗಳೂರು: ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಂಕಾ ಜಾರಕಿಹೊಳಿ ಅವರು ಇಂದು ಡಿಸಿಎಂ  ಡಿ. ಕೆ. ಶಿವಕುಮಾರ್‌  ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಆಶೀರ್ವಾದ ಪಡೆದರು.

ಸದಾಶಿವನಗರದಲ್ಲಿರುವ  ಅವರ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದ ಡಿ.ಕೆ. ಶಿವಕುಮಾರ್‌  ಅವರು,  ಅತಿ ಕಿರಿಯ ಸಂಸದರರು ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಕಂಡ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ‌ರಾಜಕೀಯ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಹಾರೈಸಿದರು.


ಈ ವೇಳೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ರಾಜಕೀಯದ ಕುರಿತು ಡಿಕೆಶಿ ಪಾಠ ಮಾಡಿದ್ದು, ಸದನದಲ್ಲಿ ಸದಾ ಹಾಜರಿದ್ದು, ಎಲ್ಲ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಶ್ರದ್ಧೆಯಿಂದ ಆಲಿಸಿ, ಸೂಕ್ತವಾಗಿ ಸ್ಪಂದಿಸುವವರು ಮಾತ್ರ ಉತ್ತಮ ಸಂಸದೀಯ ಪಟುವಾಗಿ ಬೆಳೆಯಲು ಸಾಧ್ಯ  ಕಿವಿಮಾತು ಹೇಳಿದರು.


ಸದನದಲ್ಲಿ ಸಂಸದರಾಗಿ ಹೇಗೆ ರಾಜ್ಯದ ಹಿತ ಕಾಯಬೇಕು ಎಂಬ ಬಗ್ಗೆ ತಿಳಿಸಿದ ಡಿಸಿಎಂ ಡಿ.ಕೆ. ಶಿವಕುಮಾರ ಅವರು, ಗ್ರಂಥಾಲಯದ ಪ್ರಯೋಜನ ಪಡೆದು ಸದನದಲ್ಲಿ ಮುತ್ಸದ್ದಿ ರಾಜಕಾರಣಿಗಳು ಮಾಡಿರುವ ಭಾಷಣಗಳನ್ನು ಓದುವಂತೆಯೂ ಸಲಹೆ ಮಾಡಿದರು. ಅಲ್ಲದೇ  ಜೊಲ್ಲೆ ಅವರ ವಿರುದ್ಧ ಪ್ರಚಂಡ ಬಹುಮತದಿಂದ ಜಯ ಸಾಧಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ, ಬೆಳಗಾವಿ ಬೂಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಮಾಜಿ‌ ಸಚಿವರಾದ ವೀರಕುಮಾರ ಪಾಟೀಲ, ಮಾಜಿ ಶಾಸಕರಾದ ಕಾಕಾಸಾಹೇಬ ಪಾಟೀಲ, ಶಾಸಕ ಶಾಮ ಘಾಟಗೆ, ಯುವ ನಾಯಕ ರಾಹುಲ್‌ ಜಾರಕಿಹೊಳಿ ಹಾಗೂ  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ