Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ : ಸಂಸದೆ ಪ್ರಿಯಾಂಕಾ ಜಾರಕಿಹೊಳಿ 

ನಾಗನೂರು (ಮೂಡಲಗಿ):  ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಕ್ರೀಡಾಪಟುಗಳ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರ ಹಾಗೂ ಸಂಘ -ಸಂಸ್ಥೆಗಳು ಸಹಾಯ ಸಹಕಾರ ನೀಡಬೇಕೆಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು .

ಅವರು ನಾಗನೂರು ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮೂಡಲಗಿ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ನಾಗನೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಬೆಳಗಾವಿ ವಿಭಾಗ ಮಟ್ಟದ ಮತ್ತು 14 -17 ವರ್ಷದೊಳಗಿನ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಇಲಾಖೆಯ ಖೋ ಖೋ ಪಂದ್ಯಾವಳಿಯ ಅಂಗವಾಗಿ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ,  ನಮ್ಮ ತಂದೆಯವರಾದ ಸತೀಶ ಜಾರಕಿಹೊಳಿ ಅವರು ಗ್ರಾಮೀಣ ಭಾಗದ ಕ್ರೀಡಾಪಟುಗಳ ಉತ್ತೇಜನಕ್ಕಾಗಿ ಪ್ರೋತ್ಸಾಹಕ್ಕಾಗಿ  ಸತೀಶ ಶುಗರ್ಸ್ ಅವಾರ್ಡ್ ಹೆಸರಿನಡಿ ಕ್ರೀಡೆ, ಸಾಂಸ್ಕೃತಿಕ, ಹಾಗೂ ಶೈಕ್ಷಣಿಕವಾಗಿ ಸಾಕಷ್ಟು ಕೆಲಸ ಕಾರ್ಯಗಳನ್ನು ಮಾಡಿ ತಮ್ಮೆಲ್ಲರ  ಪ್ರೀತಿಗೆ ಪಾತ್ರರಾಗಿದ್ದಾರೆ. ಗ್ರಾಮೀಣ ಭಾಗದ ಕ್ರೀಡಾಪಟುಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮಾನಸಿಕ ಹಾಗೂ ಶಾರೀರಿಕ ಸದೃಢರಾಗಿ ದೇಶ ವಿದೇಶದಲ್ಲಿ ನಡೆಯುವ  ಖೇಲೋ ಇಂಡಿಯಾ, ಒಲಂಪಿಕ್ಸ್, ಹಾಗೂ ಇತರೆ ಕ್ರೀಡೆಗಳಲ್ಲಿ ಪಾಲ್ಗೊಂಡು ವಿಜೇತರಿಗೆ ಶಿಷ್ಯವೇತನ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಲ್ಲಿ ನೌಕರಿ ಇತರೆ ಅವಕಾಶಗಳು ಲಭಿಸಲಿವೆ ಎಂದರು  .


ಧಾರವಾಡ ಬಾಲವಿಕಾಸ ಅಕಾಡೆಮಿಯ ನಿರ್ದೇಶಕ ಹಾಗೂ ಭಾರತ್ ಸ್ಕೌಟ್ಸ್ ಗೈಡ್ಸ್ ನ ರಾಜ್ಯ ಉಪಾಧ್ಯಕ್ಷ ಗಜಾನನ ಮನ್ನಿಕೇರಿ ಮಾತನಾಡಿ,  ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರ ಪ್ರಯತ್ನದಿಂದಾಗಿ ಈ ಭಾಗದ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಮಟ್ಟ, ಹಾಗೂ ವಿದೇಶದಲ್ಲೂ ಬೆಳೆಯುತ್ತಿದ್ದಾರೆ, ನಾಗನೂರು ಖೋಖೋ  ಕ್ರೀಡಾಪಟುಗಳ ತವರೂರಾಗಿದೆ. ಈ ಭಾಗದಲ್ಲಿ ಖೋ ಖೋ ಹಾಗೂ ಕ್ರೀಡಾಪಟು ಗಳನ್ನು ಉಳಿಸಿ ಬೆಳೆಸಿಕೊಂಡು ಹೋಗುತ್ತಿರುವ ತರಬೇತುದಾರ ಈರಣ್ಣ ಹಳಿಗೌಡರ ಅವರಿಗೆ ರಾಜ್ಯಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿಗಳು ಲಭಿಸಲಿ ಎಂದು ಆಶಿಸಿದರು.


 ಇದಕ್ಕೂ ಮೊದಲು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದರು.


 ಚಿಕ್ಕೋಡಿ ಡಿಡಿಪಿಐ ಸೀತಾರಾಮ ಮಾತನಾಡಿ ಕ್ರೀಡೆ ಹಾಗೂ ಕ್ರೀಡಾಪಟುಗಳು ನಿರ್ಣಾಯಕರು ನೀಡುವ ತೀರ್ಪನ್ನು ಸ್ವಾಗತಿಸಿ ಕ್ರೀಡಾ ಮೌಲ್ಯವನ್ನು ಹೆಚ್ಚಿಸಬೇಕು ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ತಮ್ಮ ಶಾಲೆ ಶಿಕ್ಷಕರ ಹಾಗೂ ಊರಿನ ಘನತೆಯನ್ನು ಹೆಚ್ಚಿಸಬೇಕು ಎಂದರು ನಂತರ ಕ್ರೀಡಾಪಟುಗಳಿಗೆ ಮಾಲೆಯನ್ನು ಹಾಕಿ ಕ್ರೀಡಾ ಜ್ಯೋತಿಯನ್ನು ಬರಮಾಡಿಕೊಂಡರು.


ಭಗೀರಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಎಲ್ ಬಾಬಲಿ ಮಾತನಾಡಿದರು. ಮೂಡಲಗಿ ಬಿಇಓ ಪ್ರಕಾಶ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.


 ನಾಗನೂರಿನ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದರು.


 ಇದೇ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಡಿಡಿಪಿಐ ಶಾಂತರಾಮು, ನಿವೃತ್ತ ಡಿಡಿಪಿಐ ಗಜಾನನ ಮನ್ನಿಕೇರಿ , ಬಿ ಇ ಓ ಪ್ರಕಾಶ ಹಿರೇಮಠ, ತರಬೇತಿದಾರ ಈರಣ್ಣ ಹಳಿಗೌಡರ,  ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಎಂ ಬಿ ದೇಸಾಯಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೆ ಸಿ ಇಟ್ಟಿಗುಡಿ, ಇವರನ್ನು ಸಂಸ್ಥೆವತಿಯಿಂದ ಮುಖ್ಯಶಿಕ್ಷಕ ಎಸ್ ಬಿ ಕೇದಾರಿ ಹಾಗೂ ಸಂಘಟಕರು ಸತ್ಕರಿಸಿದರು.


 ಬೆಳಗಾವಿ ಜಿಲ್ಲಾ ಖೋ ಖೋ ಅಸೋಸಿಯೇಷನ ಜಿಲ್ಲಾಧ್ಯಕ್ಷ ಗಜಾನನ ಯರಗಣವಿ, ಚಿಕ್ಕೋಡಿ ಜಿಲ್ಲಾ ಡಿಪಿಓ ಜುನೇದಿ ಪಟೇಲ, ನಿವೃತ್ತ ಡಿಪಿಓ ಶಾಂತರಾಮ ಜೋಗುಳೆ , ಟಿಪಿಓ ಎಸ್ ಬಿ ಹಳಿಗೌಡರ, ರಾಯಬಾಗ ಟಿಪಿಓ ಮಹಾವೀರ ಜೀರಗ್ಯಾಳ, ಗೋಕಾಕ ಟಿ ಪಿ ಓ ಎಲ್ ಕೆ ತೋರಣಗಟ್ಟಿ ಖೋ ಖೋ ಕ್ರೀಡಾಕೂಟದ ತರಬೇತಿದಾರ ಯತಿರಾಜ, ಬೆಳಗಾವಿ ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾಜು ಹಿರೇಮಠ, ಚಿಕ್ಕೋಡಿ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಸ್ ಎಂ ಲೋಕಣ್ಣವರ, ರಾಜ್ಯ ಪ್ರಾಥಮಿಕ ಶಾಲಾ ಸಂಘಟನಾ ಕಾರ್ಯದರ್ಶಿ ಮಾಲತೇಶ ಸಣ್ಣಕ್ಕಿ, ಚಿಕ್ಕೋಡಿ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿನೇಂದ್ರ ನೀಲಜಿಗಿ,  ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಎಸ್ಎಲ್ ಹೊಸಮನಿ, ಸಂಸ್ಥೆಯ ಕಾರ್ಯದರ್ಶಿ ಎಸ್ ಬಿ ಹೊಸಮನಿ, ನಿರ್ದೇಶಕರಾದ ಬಿ ಬಿ ಪಾಟೀಲ, ಎಲ್ ಬಿ ಸಕ್ರೆಪ್ಪಗೋಳ, ಬಿ ಬಿ ಗಿಡ್ಡಗೌಡ್ರ , ಬಿ ಎಂ ಬಂಡಿ, ಎಸ್ ಕೆ ಸಕರೆಪ್ಪಗೋಳ, ಸಿ ಎ ಸಕ್ರೆಪ್ಪ ಗೋಳ, ಟಿ ಎಸ್ ಸಗರಿ , ಎ ಪಿ ಪರಸನ್ನವರ, ಎಂ ಎಂ ಮಾವಿನಗಿಡದ , ಮಹೇಶ ಕಟ್ಟಿಮನಿ ,ಎಸ್ಎಂ ನಾಗನೂರ , ಎಸ್ ಎ.ಹಮ್ಮನವರ, ಮುಖ್ಯ ಶಿಕ್ಷಕ ಎಸ್ ಬಿ ಕೇದಾರಿ ಬಿ ಎಂ ಬಂಡಿ ಇದ್ದರು.


ಕುಮಾರಿ ಸಾನ್ವಿ ವಸಂತ ನಾಯಕವಾಡಿ ಭರತನಾಟ್ಯ ಮಾಡುವ ಮೂಲಕ ಪ್ರಾರ್ಥಿಸಿದರು. ಚೈತ್ರಾ ವಸ್ತ್ರದ ಹಾಗೂ ಸಹನಾ ಬೆಳಕೂಡ ವಿದ್ಯಾರ್ಥಿಗಳು ಸ್ವಾಗತಗೀತೆ ಹಾಡಿದರು. ಶಿಕ್ಷಕ ಆರ್‌ಎಂ ಗೂಡಸಿ ನಿರೂಪಿಸಿದರು. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಎಸ್ ಆರ್ ಬಾಗಡೆ ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ