LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಜೆಪಿಯಿಂದ ಇಡಿ, ಸಿಬಿಐ ದುರ್ಬಳಕೆ: ಮೃಣಾಲ್ ಹೆಬ್ಬಾಳಕರ್ ಕಿಡಿ




ಬೆಳಗಾವಿ: ಬಿಜೆಪಿಯವರು ಇಡಿ, ಸಿಬಿಐ, ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ಸಿನ ಕಟ್ಟಾ, ನಿಷ್ಠಾವಂತ ಕಾರ್ಯಕರ್ತರ ಮೇಲೆ ವಿನಾಕಾರಣ ಕೇಸು ದಾಖಲಿಸುತ್ತಿದ್ದು; ಇದು ಅವರಿಗೇ ತಿರುಗುಬಾಣವಾಗುತ್ತಿದೆ ಎಂದು ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ.


ಹಿರೇಬಾಗೇವಾಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಚಾರದಲ್ಲೂ  ಇಡಿ, ಸಿಬಿಐಗೆ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ಸಿನ ಬಲಿಷ್ಠ ನಾಯಕರ್ಯಾರನ್ನೂ ಬಿಡುತ್ತಿಲ್ಲ. ಈ ಹಿಂದೆಯೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಮೇಲೂ ಇಡಿ, ಸಿಬಿಐ ದಾಳಿ ಮಾಡಿಸಲಾಗಿತ್ತು. ತಪ್ಪು ಮಾಡದಿದ್ದರೂ ಜೈಲಿಗೆ ಹೋಗುವಂತೆ, ಮಾನಸಿಕವಾಗಿ ತೊಂದರೆ ಕೊಟ್ಟರೆಂದು ಮೃಣಾಲ್ ಕಿಡಿಕಾರಿದರು.


*ಸುಭದ್ರ ಸರ್ಕಾರ ಅಭದ್ರತೆಗೊಳಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಇಡೀ ದೇಶದಲ್ಲೇ ದಕ್ಷ ಹಾಗೂ ಸುಭದ್ರ ಸರ್ಕಾರ.  ಆದರೆ, ನಮ್ಮ ಸುಭದ್ರ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಆದರೆ, ಬಿಜೆಪಿಯವರ ಕುತಂತ್ರ ನಡೆಯುವುದಿಲ್ಲ. ನಮ್ಮ ಸಿದ್ದರಾಮಯ್ಯನವರನ್ನು ಬಿಜೆಪಿಯವರು ಏನೂ ಮಾಡಲು ಕೂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.


ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ; ಯಾರಲ್ಲೂ ಸಹಮತವಿಲ್ಲ; ಬಿಜೆಪಿಯವರೇ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತ ತಮ್ಮ ಪಕ್ಷದ ನಾಯಕರ ಮಾನಹಾನಿ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಜ್ಯ ಬಿಜೆಪಿ ಎರಡ್ಮೂರು ಗುಂಪುಗಳಾಗಿದೆ. ಆದರೆ, ತಮ್ಮ ಪಕ್ಷದ ನಡೆಯ ಬಗ್ಗೆ ಗಮನಿಸದೆ ಬಿಜೆಪಿಯವರು, ಕಾಂಗ್ರೆಸ್ಸಿನ ನಾಯಕರ ನಡುವೆ ಒಡಕುಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಮೃಣಾಲ್ ಹೆಬ್ಬಾಳಕರ್ ಆರೋಪಿಸಿದರು.






Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್