Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಯಿಂದ ಇಡಿ, ಸಿಬಿಐ ದುರ್ಬಳಕೆ: ಮೃಣಾಲ್ ಹೆಬ್ಬಾಳಕರ್ ಕಿಡಿ




ಬೆಳಗಾವಿ: ಬಿಜೆಪಿಯವರು ಇಡಿ, ಸಿಬಿಐ, ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ಸಿನ ಕಟ್ಟಾ, ನಿಷ್ಠಾವಂತ ಕಾರ್ಯಕರ್ತರ ಮೇಲೆ ವಿನಾಕಾರಣ ಕೇಸು ದಾಖಲಿಸುತ್ತಿದ್ದು; ಇದು ಅವರಿಗೇ ತಿರುಗುಬಾಣವಾಗುತ್ತಿದೆ ಎಂದು ಯುವ ಕಾಂಗ್ರೆಸ್ ನಾಯಕ ಮೃಣಾಲ್ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ.


ಹಿರೇಬಾಗೇವಾಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಚಾರದಲ್ಲೂ  ಇಡಿ, ಸಿಬಿಐಗೆ ಸಿಲುಕಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ಸಿನ ಬಲಿಷ್ಠ ನಾಯಕರ್ಯಾರನ್ನೂ ಬಿಡುತ್ತಿಲ್ಲ. ಈ ಹಿಂದೆಯೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಮೇಲೂ ಇಡಿ, ಸಿಬಿಐ ದಾಳಿ ಮಾಡಿಸಲಾಗಿತ್ತು. ತಪ್ಪು ಮಾಡದಿದ್ದರೂ ಜೈಲಿಗೆ ಹೋಗುವಂತೆ, ಮಾನಸಿಕವಾಗಿ ತೊಂದರೆ ಕೊಟ್ಟರೆಂದು ಮೃಣಾಲ್ ಕಿಡಿಕಾರಿದರು.


*ಸುಭದ್ರ ಸರ್ಕಾರ ಅಭದ್ರತೆಗೊಳಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಇಡೀ ದೇಶದಲ್ಲೇ ದಕ್ಷ ಹಾಗೂ ಸುಭದ್ರ ಸರ್ಕಾರ.  ಆದರೆ, ನಮ್ಮ ಸುಭದ್ರ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಆದರೆ, ಬಿಜೆಪಿಯವರ ಕುತಂತ್ರ ನಡೆಯುವುದಿಲ್ಲ. ನಮ್ಮ ಸಿದ್ದರಾಮಯ್ಯನವರನ್ನು ಬಿಜೆಪಿಯವರು ಏನೂ ಮಾಡಲು ಕೂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.


ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ; ಯಾರಲ್ಲೂ ಸಹಮತವಿಲ್ಲ; ಬಿಜೆಪಿಯವರೇ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತ ತಮ್ಮ ಪಕ್ಷದ ನಾಯಕರ ಮಾನಹಾನಿ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಜ್ಯ ಬಿಜೆಪಿ ಎರಡ್ಮೂರು ಗುಂಪುಗಳಾಗಿದೆ. ಆದರೆ, ತಮ್ಮ ಪಕ್ಷದ ನಡೆಯ ಬಗ್ಗೆ ಗಮನಿಸದೆ ಬಿಜೆಪಿಯವರು, ಕಾಂಗ್ರೆಸ್ಸಿನ ನಾಯಕರ ನಡುವೆ ಒಡಕುಂಟು ಮಾಡಲು ಯತ್ನಿಸುತ್ತಿದ್ದಾರೆ ಎಂದು ಮೃಣಾಲ್ ಹೆಬ್ಬಾಳಕರ್ ಆರೋಪಿಸಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ